<p>ಬೆಳಗಾವಿ: ‘ಸ್ವಾತಂತ್ರ್ಯ ನಂತರ ಭಾರತೀಯ ಸಮಾಜಕ್ಕೆ ಹೊಂದಿಕೊಳ್ಳುವಂತಹ ರಾಜನೀತಿ ಮತ್ತು ಆರ್ಥಿಕ ನೀತಿಯನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಇನ್ನಾದರೂ ಈ ಕಾರ್ಯ ನಡೆಯುವ ಅಗತ್ಯವಿದೆ’ ಎಂದು ರಾಜ್ಯಪಾಲ ವಜೂಭಾಯಿ ಆರ್. ವಾಲಾ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಅಧ್ಯಯನ ಪೀಠವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೀಠ ಸ್ಥಾಪನೆಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ₹5.78 ಕೋಟಿ ಅನುದಾನ ಕೊಟ್ಟಿದೆ. ದಕ್ಷಿಣ ಭಾರತದಲ್ಲಿ ದೀನದಯಾಳ್ ಹೆಸರಿನಲ್ಲಿ ಇರುವ ಮೊದಲ ಪೀಠ ಇದು ಎಂದು ಹೇಳಲಾಗಿದೆ.</p>.<p>ಪೀಠ ಉದ್ಘಾಟನೆ ಬಳಿಕ ಮಾತನಾಡಿದ ರಾಜ್ಯಪಾಲರು, ‘ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯ ನಿರ್ಮಾಣದಿಂದ ಆ ಭಾಗದ ಜನರಿಗೆ ಅನುಕೂಲವಾಗುತ್ತದೆ’ ಎಂದರು. ‘ರೈತರಿಗೆ ಸಾಲ ಕೊಡಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ನೀರು. ನದಿಗಳ ಜೋಡಣೆಯಿಂದ ಇದು ಸಾಧ್ಯವಾಗುತ್ತದೆ. ಇದರೊಂದಿಗೆ ವಾಟರ್ ಗ್ರಿಡ್ ಯೋಜನೆ ಜಾರಿಗೊಳಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಸ್ವಾತಂತ್ರ್ಯ ನಂತರ ಭಾರತೀಯ ಸಮಾಜಕ್ಕೆ ಹೊಂದಿಕೊಳ್ಳುವಂತಹ ರಾಜನೀತಿ ಮತ್ತು ಆರ್ಥಿಕ ನೀತಿಯನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಇನ್ನಾದರೂ ಈ ಕಾರ್ಯ ನಡೆಯುವ ಅಗತ್ಯವಿದೆ’ ಎಂದು ರಾಜ್ಯಪಾಲ ವಜೂಭಾಯಿ ಆರ್. ವಾಲಾ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಅಧ್ಯಯನ ಪೀಠವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೀಠ ಸ್ಥಾಪನೆಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ₹5.78 ಕೋಟಿ ಅನುದಾನ ಕೊಟ್ಟಿದೆ. ದಕ್ಷಿಣ ಭಾರತದಲ್ಲಿ ದೀನದಯಾಳ್ ಹೆಸರಿನಲ್ಲಿ ಇರುವ ಮೊದಲ ಪೀಠ ಇದು ಎಂದು ಹೇಳಲಾಗಿದೆ.</p>.<p>ಪೀಠ ಉದ್ಘಾಟನೆ ಬಳಿಕ ಮಾತನಾಡಿದ ರಾಜ್ಯಪಾಲರು, ‘ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯ ನಿರ್ಮಾಣದಿಂದ ಆ ಭಾಗದ ಜನರಿಗೆ ಅನುಕೂಲವಾಗುತ್ತದೆ’ ಎಂದರು. ‘ರೈತರಿಗೆ ಸಾಲ ಕೊಡಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ನೀರು. ನದಿಗಳ ಜೋಡಣೆಯಿಂದ ಇದು ಸಾಧ್ಯವಾಗುತ್ತದೆ. ಇದರೊಂದಿಗೆ ವಾಟರ್ ಗ್ರಿಡ್ ಯೋಜನೆ ಜಾರಿಗೊಳಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>