<p><strong>ಬೆಂಗಳೂರು:</strong> ಮೈಸೂರಿನ ವಾಕ್–ಶ್ರವಣ ಸಂಸ್ಥೆಯ ಘಟಕವನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಲು ಅನುಮೋದನೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದರು.</p>.<p>ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ಸಭೆಯು ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು.</p>.<p>ದಿನೇಶ್ ಗುಂಡೂರಾವ್ ಅವರು ವರ್ಚ್ಯುವಲ್ ಆಗಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ, ಉತ್ತರ ಕರ್ನಾಟಕಕ್ಕೆ ವಾಕ್–ಶ್ರವಣ ಸಂಸ್ಥೆಯ ಅಗತ್ಯವಿದೆ ಎಂದು ವಿಷಯ ಪ್ರಸ್ತಾಪಿಸಿದರು. ‘ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದರೆ, ರಾಜ್ಯ ಸರ್ಕಾರವು ಅಗತ್ಯ ಭೂಮಿ ಮತ್ತು ಮೂಲಸೌಕರ್ಯಗಳನ್ನು ಒದಗಿಸಲಿದೆ. ಕೇಂದ್ರವು ತಾಂತ್ರಿಕ ಘಟಕಗಳು ಮತ್ತು ನುರಿತ ತಜ್ಞರ ವಿಚಾರದಲ್ಲಿ ನೆರವು ಒದಗಿಸಬೇಕು. ಈ ಘಟಕವನ್ನು ತರಬೇತಿ, ಸೇವೆ ಮತ್ತು ಸಂಶೋಧನೆಗೆ ಬಳಸಿಕೊಳ್ಳಬಹುದು’ ಎಂದು ಪ್ರಸ್ತಾಪಿಸಿದರು.</p>.<p>ಜತೆಗೆ, ‘ಆರೋಗ್ಯ ಸಿಬ್ಬಂದಿಗೆ ಈ ವಿಚಾರದಲ್ಲಿ ತರಬೇತಿ ನೀಡುವ ಉದ್ದೇಶದಿಂದ 3–6 ತಿಂಗಳ ಅಲ್ಪಾವಧಿಯ ಕೋರ್ಸ್ ಆರಂಭಿಸಬಹುದಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮೈಸೂರಿನ ವಾಕ್–ಶ್ರವಣ ಸಂಸ್ಥೆಯ ಸಹಯೋಗದಲ್ಲಿ ನಡೆಸಬಹುದಾಗಿದೆ. ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವಾಕ್–ಶ್ರವಣ ಸಂಸ್ಥೆಯ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸಬಹುದು. ಈ ಪ್ರಸ್ತಾಪಗಳಿಗೆ ಕೇಂದ್ರವು ಅನುಮೋದನೆ ನೀಡಬೇಕು’ ಎಂದು ಕೋರಿದರು.</p>.<p>ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ‘ರಾಜ್ಯ ಸರ್ಕಾರಿ ಈ ಸಂಬಂಧ ಪ್ರಸ್ತಾಪವನ್ನು ಕಳುಹಿಸಲಿ. ಅದನ್ನು ಪರಿಶೀಲಿಸಿ, ಕ್ರಮ ತಗೆದುಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರಿನ ವಾಕ್–ಶ್ರವಣ ಸಂಸ್ಥೆಯ ಘಟಕವನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಲು ಅನುಮೋದನೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದರು.</p>.<p>ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ಸಭೆಯು ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು.</p>.<p>ದಿನೇಶ್ ಗುಂಡೂರಾವ್ ಅವರು ವರ್ಚ್ಯುವಲ್ ಆಗಿ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ, ಉತ್ತರ ಕರ್ನಾಟಕಕ್ಕೆ ವಾಕ್–ಶ್ರವಣ ಸಂಸ್ಥೆಯ ಅಗತ್ಯವಿದೆ ಎಂದು ವಿಷಯ ಪ್ರಸ್ತಾಪಿಸಿದರು. ‘ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದರೆ, ರಾಜ್ಯ ಸರ್ಕಾರವು ಅಗತ್ಯ ಭೂಮಿ ಮತ್ತು ಮೂಲಸೌಕರ್ಯಗಳನ್ನು ಒದಗಿಸಲಿದೆ. ಕೇಂದ್ರವು ತಾಂತ್ರಿಕ ಘಟಕಗಳು ಮತ್ತು ನುರಿತ ತಜ್ಞರ ವಿಚಾರದಲ್ಲಿ ನೆರವು ಒದಗಿಸಬೇಕು. ಈ ಘಟಕವನ್ನು ತರಬೇತಿ, ಸೇವೆ ಮತ್ತು ಸಂಶೋಧನೆಗೆ ಬಳಸಿಕೊಳ್ಳಬಹುದು’ ಎಂದು ಪ್ರಸ್ತಾಪಿಸಿದರು.</p>.<p>ಜತೆಗೆ, ‘ಆರೋಗ್ಯ ಸಿಬ್ಬಂದಿಗೆ ಈ ವಿಚಾರದಲ್ಲಿ ತರಬೇತಿ ನೀಡುವ ಉದ್ದೇಶದಿಂದ 3–6 ತಿಂಗಳ ಅಲ್ಪಾವಧಿಯ ಕೋರ್ಸ್ ಆರಂಭಿಸಬಹುದಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಮೈಸೂರಿನ ವಾಕ್–ಶ್ರವಣ ಸಂಸ್ಥೆಯ ಸಹಯೋಗದಲ್ಲಿ ನಡೆಸಬಹುದಾಗಿದೆ. ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ವಾಕ್–ಶ್ರವಣ ಸಂಸ್ಥೆಯ ಸಂಪರ್ಕ ಕೇಂದ್ರಗಳನ್ನು ಸ್ಥಾಪಿಸಬಹುದು. ಈ ಪ್ರಸ್ತಾಪಗಳಿಗೆ ಕೇಂದ್ರವು ಅನುಮೋದನೆ ನೀಡಬೇಕು’ ಎಂದು ಕೋರಿದರು.</p>.<p>ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ‘ರಾಜ್ಯ ಸರ್ಕಾರಿ ಈ ಸಂಬಂಧ ಪ್ರಸ್ತಾಪವನ್ನು ಕಳುಹಿಸಲಿ. ಅದನ್ನು ಪರಿಶೀಲಿಸಿ, ಕ್ರಮ ತಗೆದುಕೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>