<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಕೇವಲ ಹೆಸರಿಗಷ್ಟೆ ರಾಜಾಹುಲಿಯಾದರೆ ಪ್ರಯೋಜನ ಇಲ್ಲ. ಎಲ್ಲ ವಿಚಾರದಲ್ಲೂ ರಾಜಾಹುಲಿ ಆಗಬೇಕು’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ಕೇಂದ್ರದ ಮುಂದೆ ಮಾತನಾಡುವ ಧೈರ್ಯ ರಾಜ್ಯ ಸರ್ಕಾರಕ್ಕೆ ಇಲ್ಲ. ಏನೂ ಮಾಡದೆ ಕೈ ಕಟ್ಟಿ ಕೂತರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಲಿದೆ. ರಾಜಾಹುಲಿ ಅಂತ ಬಿರುದು ಕೊಟ್ಟ ಮೇಲೆ ಮುಖ್ಯಮಂತ್ರಿ ಆ ಹೆಸರಿನಂತೆ ಕೆಲಸ ಮಾಡಬೇಕು’ ಎಂದರು.</p>.<p>‘ಡ್ರಗ್ಸ್ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದು ಗೊತ್ತಾಗಬೇಕು. ಬೆಂಗಳೂರಷ್ಟೇ ಅಲ್ಲ, ಇಡೀ ದೇಶದಲ್ಲಿ ಈ ಜಾಲ ವ್ಯಾಪಕವಾಗಿ ಹಬ್ಬಿದೆ. ಯಾರು ಪೂರೈಕೆ ಮಾಡುತ್ತಾರೆ, ಯಾರು ವಿತರಿಸುತ್ತಾರೆ ಅವರನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಸದನಲ್ಲೂ ಡ್ರಗ್ಸ್ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಬೇಕು’ ಎಂದೂ ದಿನೇಶ್ ಸಲಹೆ ನೀಡಿದರು.</p>.<p><strong>ಸಿಸಿಬಿ ಸಮಗ್ರ ತನಿಖೆ ನಡೆಸಲಿ</strong>: ‘ಡ್ರಗ್ಸ್ ವಿಚಾರದಲ್ಲಿ ರಾಜ್ಯದ ಕಾನೂನು ಗಟ್ಟಿಯಾಗಿಲ್ಲ. ಕಾನೂನು ಇನ್ನಷ್ಟು ಗಟ್ಟಿಯಾದರೆ ಮಾತ್ರ ಡ್ರಗ್ಸ್ ಹಾವಳಿ ತಡೆಗಟ್ಟಬಹುದು. ಇಲ್ಲದೆ ಹೋದರೆ ಪ್ರಯೋಜನವಿಲ್ಲ’ ಎಂದು ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಹೇಳಿದರು.</p>.<p>‘ಇಂದ್ರಜಿತ್ಗೆ ನಮ್ಮೆಲ್ಲರ ಬೆಂಬಲವಿದೆ. ಕೇವಲ ನಟ, ನಟಿಯರು ಎಂದು ಒಂದೆರಡು ದಿನ ಸುದ್ದಿ ಮಾಡಿದರೆ ಪ್ರಯೋಜನ ಇಲ್ಲ. ಎಲ್ಲ ವಿಚಾರಗಳನ್ನು ಸಿಸಿಬಿ ಪೊಲೀಸರು ಸಮಗ್ರವಾಗಿ ತನಿಖೆ ಮಾಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಕೇವಲ ಹೆಸರಿಗಷ್ಟೆ ರಾಜಾಹುಲಿಯಾದರೆ ಪ್ರಯೋಜನ ಇಲ್ಲ. ಎಲ್ಲ ವಿಚಾರದಲ್ಲೂ ರಾಜಾಹುಲಿ ಆಗಬೇಕು’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.</p>.<p>‘ಕೇಂದ್ರದ ಮುಂದೆ ಮಾತನಾಡುವ ಧೈರ್ಯ ರಾಜ್ಯ ಸರ್ಕಾರಕ್ಕೆ ಇಲ್ಲ. ಏನೂ ಮಾಡದೆ ಕೈ ಕಟ್ಟಿ ಕೂತರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಲಿದೆ. ರಾಜಾಹುಲಿ ಅಂತ ಬಿರುದು ಕೊಟ್ಟ ಮೇಲೆ ಮುಖ್ಯಮಂತ್ರಿ ಆ ಹೆಸರಿನಂತೆ ಕೆಲಸ ಮಾಡಬೇಕು’ ಎಂದರು.</p>.<p>‘ಡ್ರಗ್ಸ್ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದು ಗೊತ್ತಾಗಬೇಕು. ಬೆಂಗಳೂರಷ್ಟೇ ಅಲ್ಲ, ಇಡೀ ದೇಶದಲ್ಲಿ ಈ ಜಾಲ ವ್ಯಾಪಕವಾಗಿ ಹಬ್ಬಿದೆ. ಯಾರು ಪೂರೈಕೆ ಮಾಡುತ್ತಾರೆ, ಯಾರು ವಿತರಿಸುತ್ತಾರೆ ಅವರನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಸದನಲ್ಲೂ ಡ್ರಗ್ಸ್ ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳಬೇಕು’ ಎಂದೂ ದಿನೇಶ್ ಸಲಹೆ ನೀಡಿದರು.</p>.<p><strong>ಸಿಸಿಬಿ ಸಮಗ್ರ ತನಿಖೆ ನಡೆಸಲಿ</strong>: ‘ಡ್ರಗ್ಸ್ ವಿಚಾರದಲ್ಲಿ ರಾಜ್ಯದ ಕಾನೂನು ಗಟ್ಟಿಯಾಗಿಲ್ಲ. ಕಾನೂನು ಇನ್ನಷ್ಟು ಗಟ್ಟಿಯಾದರೆ ಮಾತ್ರ ಡ್ರಗ್ಸ್ ಹಾವಳಿ ತಡೆಗಟ್ಟಬಹುದು. ಇಲ್ಲದೆ ಹೋದರೆ ಪ್ರಯೋಜನವಿಲ್ಲ’ ಎಂದು ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಹೇಳಿದರು.</p>.<p>‘ಇಂದ್ರಜಿತ್ಗೆ ನಮ್ಮೆಲ್ಲರ ಬೆಂಬಲವಿದೆ. ಕೇವಲ ನಟ, ನಟಿಯರು ಎಂದು ಒಂದೆರಡು ದಿನ ಸುದ್ದಿ ಮಾಡಿದರೆ ಪ್ರಯೋಜನ ಇಲ್ಲ. ಎಲ್ಲ ವಿಚಾರಗಳನ್ನು ಸಿಸಿಬಿ ಪೊಲೀಸರು ಸಮಗ್ರವಾಗಿ ತನಿಖೆ ಮಾಡಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>