<p><strong>ಬೆಂಗಳೂರು:</strong> ರಮೇಶ ಜಾರಕಿಹೊಳಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಅವರನ್ನು ಮತ್ತೊಮ್ಮೆ ವಿಚಾರಣೆ ನಡೆಸಲು ಪೊಲೀಸರು ಸಿದ್ಧರಾಗಿದ್ದು, ಬುಧವಾರ ಬೆಳಿಗ್ಗೆ ಠಾಣೆಗೆ ಬರುವಂತೆ ಸೂಚನೆ ನೀಡಿರುವುದಾಗಿ ಗೊತ್ತಾಗಿದೆ.</p>.<p>ಸಿ.ಡಿ. ಪ್ರಕರಣ ಸಂಬಂಧ ಮಾ. 2ರಂದು ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್, ಇದೀಗ ದೂರು ಹಿಂಪಡೆಯುವುದಾಗಿ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಅವರಿಗೆ ಐದು ಪುಟಗಳ ಪತ್ರ ನೀಡಿದ್ದಾರೆ.</p>.<p>ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ‘ದೂರು ಹಿಂಪಡೆಯಲು ಸದ್ಯಕ್ಕೆ ಅವಕಾಶವಿಲ್ಲ. ದೂರಿನ ಬಗ್ಗೆ ಕೆಲ ಮಾಹಿತಿಗಳನ್ನು ಕಲೆಹಾಕಲು ತಮ್ಮ ವಿಚಾರಣೆ ಅಗತ್ಯವಿದೆ. ಹೀಗಾಗಿ, ಠಾಣೆಗೆ ಬನ್ನಿ’ ಎಂದಿರುವುದಾಗಿ ಗೊತ್ತಾಗಿದೆ. ಪೊಲೀಸರ ಸೂಚನೆಯಂತೆ ದಿನೇಶ್ ಬುಧವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.</p>.<p><strong>ತನಿಖೆಗೆ ಕಾಲಾವಕಾಶ:</strong> ‘ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ದಿನೇಶ್ ದೂರು ಸಲ್ಲಿಸಿದ್ದಾರೆ. ಅದನ್ನು ಸ್ವೀಕರಿಸಿ ಪ್ರಾಥಮಿಕ ತನಿಖೆ ಆರಂಭಿಸಲಾಗಿದ್ದು, ಕೆಲ ಮಾಹಿತಿಗಳನ್ನು ಈಗಾಗಲೇ ಕಲೆ ಹಾಕಲಾಗಿದೆ. ಈ ಅವಧಿಯಲ್ಲಿ ಏಕಾಏಕಿ ದೂರು ಹಿಂಪಡೆಯಲು ಅವಕಾಶವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪ್ರಕರಣದ ಬಗ್ಗೆ ತನಿಖಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಕಲೆಹಾಕುವ ಮಾಹಿತಿಗಳನ್ನು ಅವರೇ ಪರಿಶೀಲನೆ ನಡೆಸಲಿದ್ದಾರೆ. ಅದಾದ ನಂತರವೇ ದೂರಿನಡಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತನಿಖಾಧಿಕಾರಿಯೇ ತೀರ್ಮಾನಿಸಲಿದ್ದಾರೆ. ಇದಕ್ಕಾಗಿ ದೂರು ಸ್ವೀಕಾರವಾದ ದಿನದಿಂದ 15 ದಿನ ಕಾಲಾವಕಾಶವೂ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಮೇಶ ಜಾರಕಿಹೊಳಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಅವರನ್ನು ಮತ್ತೊಮ್ಮೆ ವಿಚಾರಣೆ ನಡೆಸಲು ಪೊಲೀಸರು ಸಿದ್ಧರಾಗಿದ್ದು, ಬುಧವಾರ ಬೆಳಿಗ್ಗೆ ಠಾಣೆಗೆ ಬರುವಂತೆ ಸೂಚನೆ ನೀಡಿರುವುದಾಗಿ ಗೊತ್ತಾಗಿದೆ.</p>.<p>ಸಿ.ಡಿ. ಪ್ರಕರಣ ಸಂಬಂಧ ಮಾ. 2ರಂದು ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್, ಇದೀಗ ದೂರು ಹಿಂಪಡೆಯುವುದಾಗಿ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಅವರಿಗೆ ಐದು ಪುಟಗಳ ಪತ್ರ ನೀಡಿದ್ದಾರೆ.</p>.<p>ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ‘ದೂರು ಹಿಂಪಡೆಯಲು ಸದ್ಯಕ್ಕೆ ಅವಕಾಶವಿಲ್ಲ. ದೂರಿನ ಬಗ್ಗೆ ಕೆಲ ಮಾಹಿತಿಗಳನ್ನು ಕಲೆಹಾಕಲು ತಮ್ಮ ವಿಚಾರಣೆ ಅಗತ್ಯವಿದೆ. ಹೀಗಾಗಿ, ಠಾಣೆಗೆ ಬನ್ನಿ’ ಎಂದಿರುವುದಾಗಿ ಗೊತ್ತಾಗಿದೆ. ಪೊಲೀಸರ ಸೂಚನೆಯಂತೆ ದಿನೇಶ್ ಬುಧವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.</p>.<p><strong>ತನಿಖೆಗೆ ಕಾಲಾವಕಾಶ:</strong> ‘ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ದಿನೇಶ್ ದೂರು ಸಲ್ಲಿಸಿದ್ದಾರೆ. ಅದನ್ನು ಸ್ವೀಕರಿಸಿ ಪ್ರಾಥಮಿಕ ತನಿಖೆ ಆರಂಭಿಸಲಾಗಿದ್ದು, ಕೆಲ ಮಾಹಿತಿಗಳನ್ನು ಈಗಾಗಲೇ ಕಲೆ ಹಾಕಲಾಗಿದೆ. ಈ ಅವಧಿಯಲ್ಲಿ ಏಕಾಏಕಿ ದೂರು ಹಿಂಪಡೆಯಲು ಅವಕಾಶವಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಪ್ರಕರಣದ ಬಗ್ಗೆ ತನಿಖಾಧಿಕಾರಿ ತನಿಖೆ ನಡೆಸುತ್ತಿದ್ದಾರೆ. ಕಲೆಹಾಕುವ ಮಾಹಿತಿಗಳನ್ನು ಅವರೇ ಪರಿಶೀಲನೆ ನಡೆಸಲಿದ್ದಾರೆ. ಅದಾದ ನಂತರವೇ ದೂರಿನಡಿ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತನಿಖಾಧಿಕಾರಿಯೇ ತೀರ್ಮಾನಿಸಲಿದ್ದಾರೆ. ಇದಕ್ಕಾಗಿ ದೂರು ಸ್ವೀಕಾರವಾದ ದಿನದಿಂದ 15 ದಿನ ಕಾಲಾವಕಾಶವೂ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>