<p><strong>ಬೆಂಗಳೂರು: </strong>‘ಎಚ್ಚರಿಕೆ ನೋಟಿಸ್ ನೀಡಿದರೂ 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದ ಪ್ರತಿಭಟನಾನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಸಿಬ್ಬಂದಿಯನ್ನು ವಜಾಗೊಳಿಸಿ, ತೆರವಾದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಎನ್ಎಚ್ಎಂ ನಿರ್ದೇಶಕರು ಸೂಚಿಸಿದ್ದಾರೆ. </p>.<p>ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ತುರ್ತು ಸಭೆ ನಡೆಸಿ, ಸಿಬ್ಬಂದಿಯನ್ನು ವಜಾಗೊಳಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.</p>.<p>ಪ್ರತಿಭಟನೆಯನ್ನು ನಿಲ್ಲಿಸಿ, 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮಾ.16ರಂದು ಎಚ್ಚರಿಕೆ ನೋಟಿಸ್ ನೀಡಲಾಗಿತ್ತು. ಮುಷ್ಕರ ಮುಂದುವರಿಸಿದ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಎಸ್ಮಾ ಕಾಯ್ದೆ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಕೆಲವು ಜಿಲ್ಲೆಗಳ ನೌಕರರು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ. </p>.<p>ಎನ್ಎಚ್ಎಂ ಅಡಿ 30,574 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಳಗುತ್ತಿಗೆ ನೌಕರರ ಸಂಘವು ವಿವಿಧ ಬೇಡಿಕೆಗಳ ಸಂಬಂಧ ಫೆ.13ರಿಂದಲೂ ಪ್ರತಿಭಟನೆ ನಡೆಸುತ್ತಿದೆ. ಶೇ 15ರಷ್ಟು ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆದರೂ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿದಾಗ, ಮಣಿಪುರ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ನೌಕರರನ್ನು ಕಾಯಂಗೊಳಿಸಿಲ್ಲ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಎಚ್ಚರಿಕೆ ನೋಟಿಸ್ ನೀಡಿದರೂ 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗದ ಪ್ರತಿಭಟನಾನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ಸಿಬ್ಬಂದಿಯನ್ನು ವಜಾಗೊಳಿಸಿ, ತೆರವಾದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು’ ಎಂದು ಎನ್ಎಚ್ಎಂ ನಿರ್ದೇಶಕರು ಸೂಚಿಸಿದ್ದಾರೆ. </p>.<p>ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ತುರ್ತು ಸಭೆ ನಡೆಸಿ, ಸಿಬ್ಬಂದಿಯನ್ನು ವಜಾಗೊಳಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.</p>.<p>ಪ್ರತಿಭಟನೆಯನ್ನು ನಿಲ್ಲಿಸಿ, 48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಮಾ.16ರಂದು ಎಚ್ಚರಿಕೆ ನೋಟಿಸ್ ನೀಡಲಾಗಿತ್ತು. ಮುಷ್ಕರ ಮುಂದುವರಿಸಿದ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಎಸ್ಮಾ ಕಾಯ್ದೆ ಜಾರಿಗೊಳಿಸುವಂತೆ ಸೂಚನೆ ನೀಡಲಾಗಿತ್ತು. ಕೆಲವು ಜಿಲ್ಲೆಗಳ ನೌಕರರು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ. </p>.<p>ಎನ್ಎಚ್ಎಂ ಅಡಿ 30,574 ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒಳಗುತ್ತಿಗೆ ನೌಕರರ ಸಂಘವು ವಿವಿಧ ಬೇಡಿಕೆಗಳ ಸಂಬಂಧ ಫೆ.13ರಿಂದಲೂ ಪ್ರತಿಭಟನೆ ನಡೆಸುತ್ತಿದೆ. ಶೇ 15ರಷ್ಟು ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಆದರೂ ಕಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿದಾಗ, ಮಣಿಪುರ ಹೊರತುಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ನೌಕರರನ್ನು ಕಾಯಂಗೊಳಿಸಿಲ್ಲ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>