<p><strong>ಬೆಂಗಳೂರು:</strong> ಕೋವಿಡ್–19 ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಹೈಕೋರ್ಟ್ ಸೇರ್ಪಡೆ ಮಾಡಿದೆ.</p>.<p>ಡಿ.5ರಂದು ಕರೆ ನೀಡಿರುವ ಬಂದ್ ವೇಳೆ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ನಿರ್ದೇಶನ ನೀಡಿದೆ.</p>.<p>ರಾಜಕೀಯ ಪಕ್ಷಗಳ ರ್ಯಾಲಿ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಮತ್ತು ಅಂತರ ಕಾಪಾಡುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.</p>.<p>ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಜೆಡಿಎಸ್, ಕನ್ನಡ ಚಳವಳಿ ವಾಟಾಳ್ ಪಕ್ಷಗಳನ್ನು ಪ್ರತಿವಾದಿಗಳನ್ನು ಮಾಡಿರುವ ಪೀಠ, ‘ಈ ಹಿಂದೆ ನಡೆದಿರುವ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಡವಾಗಿ ಕ್ರಮ ಕೈಗೊಂಡಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.</p>.<p>‘ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವ ನಿಯಮಗಳನ್ನು ಅನುಷ್ಠಾನಗೊಳಿಸುವುದು ರಾಜಕೀಯ ಪಕ್ಷಗಳ ಪ್ರಮುಖ ಜವಾಬ್ದಾರಿ. ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲು ಪಕ್ಷಗಳು ಸಿದ್ಧ ಇವೆಯೇ ಎಂಬುದರ ಕುರಿತು ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ಪ್ರತಿವಾದಿಗಳಿಗೆ ಪೀಠ ಸೂಚನೆ ನೀಡಿತು.</p>.<p>‘ಕನ್ನಡ ಚಳವಳಿ ವಾಟಾಳ್ ಪಕ್ಷ ಡಿ.5ರಂದು ರಾಜ್ಯ ಬಂದ್ಗೆ ಕರೆ ನೀಡಿದೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆಯಾಗುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್–19 ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ರಾಜಕೀಯ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಹೈಕೋರ್ಟ್ ಸೇರ್ಪಡೆ ಮಾಡಿದೆ.</p>.<p>ಡಿ.5ರಂದು ಕರೆ ನೀಡಿರುವ ಬಂದ್ ವೇಳೆ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ನಿರ್ದೇಶನ ನೀಡಿದೆ.</p>.<p>ರಾಜಕೀಯ ಪಕ್ಷಗಳ ರ್ಯಾಲಿ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಮತ್ತು ಅಂತರ ಕಾಪಾಡುವ ಬಗ್ಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.</p>.<p>ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ), ಜೆಡಿಎಸ್, ಕನ್ನಡ ಚಳವಳಿ ವಾಟಾಳ್ ಪಕ್ಷಗಳನ್ನು ಪ್ರತಿವಾದಿಗಳನ್ನು ಮಾಡಿರುವ ಪೀಠ, ‘ಈ ಹಿಂದೆ ನಡೆದಿರುವ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ತಡವಾಗಿ ಕ್ರಮ ಕೈಗೊಂಡಿದ್ದಾರೆ’ ಎಂದು ಅಭಿಪ್ರಾಯಪಟ್ಟಿತು.</p>.<p>‘ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವ ನಿಯಮಗಳನ್ನು ಅನುಷ್ಠಾನಗೊಳಿಸುವುದು ರಾಜಕೀಯ ಪಕ್ಷಗಳ ಪ್ರಮುಖ ಜವಾಬ್ದಾರಿ. ಪಕ್ಷದ ಕಾರ್ಯಕರ್ತರಿಗೆ ಸೂಚನೆಗಳನ್ನು ನೀಡಲು ಪಕ್ಷಗಳು ಸಿದ್ಧ ಇವೆಯೇ ಎಂಬುದರ ಕುರಿತು ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ಪ್ರತಿವಾದಿಗಳಿಗೆ ಪೀಠ ಸೂಚನೆ ನೀಡಿತು.</p>.<p>‘ಕನ್ನಡ ಚಳವಳಿ ವಾಟಾಳ್ ಪಕ್ಷ ಡಿ.5ರಂದು ರಾಜ್ಯ ಬಂದ್ಗೆ ಕರೆ ನೀಡಿದೆ. ಈ ಸಂದರ್ಭದಲ್ಲಿ ನಿಯಮ ಉಲ್ಲಂಘನೆಯಾಗುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>