‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಹೀಗಾಗಿ, ಕಾಂಗ್ರೆಸ್ನವರಿಗೆ ಬಿಜೆಪಿ ವಿರುದ್ಧ ಟೀಕಿಸಲು ಯಾವುದೇ ಅವಕಾಶವಿಲ್ಲ. ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಹಿರಿಯರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ಶೋಭೆ ತರುವುದಿಲ್ಲ. ಈ ನಿಟ್ಟಿನಲ್ಲಿ ಅವರಿಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.