ಹರೀಶ್ ಕುಮಾರ್ ವಿರುದ್ಧದ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ 10 ಸಾಕ್ಷಿಗಳನ್ನು ಪರಿಶೀಲಿಸಿತ್ತು. ಆದರೆ, ಹರೀಶ್ ಕುಮಾರ್ ಪರ ವಕೀಲರು ಗೈರಾಗಿದ್ದ ಕಾರಣ ಸಾಕ್ಷಿಗಳನ್ನು ಪಾಟಿ ಸವಾಲಿಗೆ ಒಳಪಡಿಸಿರಲಿಲ್ಲ. ನಂತರ ಹರೀಶ್ ಕುಮಾರ್ ಅವರನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲ ಎಚ್.ಕೆ.ಪವನ್ ವಾದ ಮಂಡಿಸಿದರು.