<p><strong>ಬೆಂಗಳೂರು:</strong> ಅಂಗವಿಕಲರಿಗೆ ಪಿಂಚಣಿ ಪರಿಷ್ಕರಿಸಲು ಪ್ರಯತ್ನಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ಸುಮಾರು 78 ಲಕ್ಷ ಜನರಿಗೆ ಸಾಮಾಜಿಕ ಭದ್ರತೆಯ ಪಿಂಚಣಿ ನೀಡಲಾಗುತ್ತಿದೆ. ದೇಶದಲ್ಲಿ ಅತ್ಯಧಿಕ ಮೊತ್ತವನ್ನು ರಾಜ್ಯ ಈ ಬಾಬ್ತಿನಲ್ಲಿ ಬಿಡುಗಡೆ ಮಾಡುತ್ತಿದೆ’ ಎಂದರು.</p>.<p>‘ಅಂಗವಿಕಲರಿಗೆ ಪಿಂಚಣಿ ಅತ್ಯಂತ ಅಗತ್ಯವಾಗಿದ್ದು, 2021ರಲ್ಲಿ ಪರಿಷ್ಕರಿಸಿ ₹2 ಸಾವಿರ ನೀಡಲಾಗುತ್ತಿದೆ. ಇದನ್ನು ಹತ್ತು ಪಟ್ಟು ಹೆಚ್ಚಿಸಬೇಕು’ ಎಂದು ಸತೀಶ್ ಒತ್ತಾಯಿಸಿದರು. ಬಿಜೆಪಿಯ ಭಾರತಿ ಶೆಟ್ಟಿ ಕೂಡ ಇದಕ್ಕೆ ಧ್ವನಿಗೂಡಿಸಿದರು.</p>.<p>‘2021ರಲ್ಲಿ ಪರಿಷ್ಕರಣೆಯಾದ ನಂತರ ಅದನ್ನು ಹೆಚ್ಚಿಸಿಲ್ಲ. ಅಂಗವಿಕಲರಿಗೆ ಹೆಚ್ಚಿನ ಪಿಂಚಣಿ ನೀಡಬೇಕೆಂಬ ಭಾವನೆ ನಮಗೂ ಇದೆ. ಕೇಂದ್ರ ಸರ್ಕಾರ ಪಿಂಚಣಿ ಮೊತ್ತವನ್ನು 13 ಲಕ್ಷ ಜನರಿಗೆ ಮಾತ್ರ ನೀಡುತ್ತಿದ್ದು, ತಲಾ ₹200, ₹300 ಎಂದು ನಿಗದಿ ಮಾಡಿದೆ. 2012ರಿಂದ ಪರಿಷ್ಕರಣೆ ಆಗಿಲ್ಲ. ಕೇಂದ್ರ ಹಣಕಾಸು ಸಚಿವರಿಗೆ ಈ ಬಗ್ಗೆ ಮನವಿ ಮಾಡಿದಾಗ, ಅದನ್ನು ಪರಿಷ್ಕರಿಸುವುದಾಗಿ ಹೇಳಿದ್ದಾರೆ’ ಎಂದು ಕೃಷ್ಣ ಬೈರೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂಗವಿಕಲರಿಗೆ ಪಿಂಚಣಿ ಪರಿಷ್ಕರಿಸಲು ಪ್ರಯತ್ನಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ಸುಮಾರು 78 ಲಕ್ಷ ಜನರಿಗೆ ಸಾಮಾಜಿಕ ಭದ್ರತೆಯ ಪಿಂಚಣಿ ನೀಡಲಾಗುತ್ತಿದೆ. ದೇಶದಲ್ಲಿ ಅತ್ಯಧಿಕ ಮೊತ್ತವನ್ನು ರಾಜ್ಯ ಈ ಬಾಬ್ತಿನಲ್ಲಿ ಬಿಡುಗಡೆ ಮಾಡುತ್ತಿದೆ’ ಎಂದರು.</p>.<p>‘ಅಂಗವಿಕಲರಿಗೆ ಪಿಂಚಣಿ ಅತ್ಯಂತ ಅಗತ್ಯವಾಗಿದ್ದು, 2021ರಲ್ಲಿ ಪರಿಷ್ಕರಿಸಿ ₹2 ಸಾವಿರ ನೀಡಲಾಗುತ್ತಿದೆ. ಇದನ್ನು ಹತ್ತು ಪಟ್ಟು ಹೆಚ್ಚಿಸಬೇಕು’ ಎಂದು ಸತೀಶ್ ಒತ್ತಾಯಿಸಿದರು. ಬಿಜೆಪಿಯ ಭಾರತಿ ಶೆಟ್ಟಿ ಕೂಡ ಇದಕ್ಕೆ ಧ್ವನಿಗೂಡಿಸಿದರು.</p>.<p>‘2021ರಲ್ಲಿ ಪರಿಷ್ಕರಣೆಯಾದ ನಂತರ ಅದನ್ನು ಹೆಚ್ಚಿಸಿಲ್ಲ. ಅಂಗವಿಕಲರಿಗೆ ಹೆಚ್ಚಿನ ಪಿಂಚಣಿ ನೀಡಬೇಕೆಂಬ ಭಾವನೆ ನಮಗೂ ಇದೆ. ಕೇಂದ್ರ ಸರ್ಕಾರ ಪಿಂಚಣಿ ಮೊತ್ತವನ್ನು 13 ಲಕ್ಷ ಜನರಿಗೆ ಮಾತ್ರ ನೀಡುತ್ತಿದ್ದು, ತಲಾ ₹200, ₹300 ಎಂದು ನಿಗದಿ ಮಾಡಿದೆ. 2012ರಿಂದ ಪರಿಷ್ಕರಣೆ ಆಗಿಲ್ಲ. ಕೇಂದ್ರ ಹಣಕಾಸು ಸಚಿವರಿಗೆ ಈ ಬಗ್ಗೆ ಮನವಿ ಮಾಡಿದಾಗ, ಅದನ್ನು ಪರಿಷ್ಕರಿಸುವುದಾಗಿ ಹೇಳಿದ್ದಾರೆ’ ಎಂದು ಕೃಷ್ಣ ಬೈರೇಗೌಡ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>