<p><strong>ಬೆಳಗಾವಿ</strong>: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ. ನಾನೇನು ಸಂದೇಶ ತಂದಿದ್ದೇನೆ ಎನ್ನುವುದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಅದನ್ನು ಆಂತರಿಕವಾಗಿ ಚರ್ಚೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿ ಶುಕ್ರವಾರ ಹೇಳಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷದ ಸಂಘಟನೆ ಹಾಗೂ ಈಚಿನ ಬೆಳವಣಿಗೆಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.</p>.<p>ಕರ್ನಾಟಕದ ಪ್ರಭಾರಿಯಾಗಿ ಇದೇ ಮೊದಲಿಗೆ ಭೇಟಿ ನೀಡಿದ್ದೇನೆ. ಈ ರಾಜ್ಯದ ಪಕ್ಷದ ಉಸ್ತುವಾರಿ ಆಗಿರುವುದು ನನ್ನ ಸೌಭಾಗ್ಯ. ಪಕ್ಷ ಬಲವರ್ಧನೆ, ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿರುವ ಯೋಜನೆಗಳನ್ನು ತಿಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸದೃಢಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.</p>.<p>ದಕ್ಷಿಣ ಭಾರತದಲ್ಲಿ ಕರ್ನಾಟಕವು ಪಕ್ಷಕ್ಕೆ ಮಹತ್ವಪೂರ್ಣವಾದ ಸ್ಥಳವಾಗಿದೆ. ಬದ್ಧತೆಯುಳ್ಳ ಕಾರ್ಯಕರ್ತರು ಇದ್ದಾರೆ. ಇಲ್ಲಿ ಪಕ್ಷ ಬಲವರ್ಧನೆ ಮಾಡಿದರೆ ದಕ್ಷಿಣ ಭಾರತದ ಇತರ ರಾಜ್ಯಗಳಲ್ಲೂ ಅಧಿಕಾರ ಪಡೆಯುವುದು ಸುಲಭವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ. ನಾನೇನು ಸಂದೇಶ ತಂದಿದ್ದೇನೆ ಎನ್ನುವುದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಅದನ್ನು ಆಂತರಿಕವಾಗಿ ಚರ್ಚೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿ ಶುಕ್ರವಾರ ಹೇಳಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷದ ಸಂಘಟನೆ ಹಾಗೂ ಈಚಿನ ಬೆಳವಣಿಗೆಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.</p>.<p>ಕರ್ನಾಟಕದ ಪ್ರಭಾರಿಯಾಗಿ ಇದೇ ಮೊದಲಿಗೆ ಭೇಟಿ ನೀಡಿದ್ದೇನೆ. ಈ ರಾಜ್ಯದ ಪಕ್ಷದ ಉಸ್ತುವಾರಿ ಆಗಿರುವುದು ನನ್ನ ಸೌಭಾಗ್ಯ. ಪಕ್ಷ ಬಲವರ್ಧನೆ, ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿರುವ ಯೋಜನೆಗಳನ್ನು ತಿಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸದೃಢಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.</p>.<p>ದಕ್ಷಿಣ ಭಾರತದಲ್ಲಿ ಕರ್ನಾಟಕವು ಪಕ್ಷಕ್ಕೆ ಮಹತ್ವಪೂರ್ಣವಾದ ಸ್ಥಳವಾಗಿದೆ. ಬದ್ಧತೆಯುಳ್ಳ ಕಾರ್ಯಕರ್ತರು ಇದ್ದಾರೆ. ಇಲ್ಲಿ ಪಕ್ಷ ಬಲವರ್ಧನೆ ಮಾಡಿದರೆ ದಕ್ಷಿಣ ಭಾರತದ ಇತರ ರಾಜ್ಯಗಳಲ್ಲೂ ಅಧಿಕಾರ ಪಡೆಯುವುದು ಸುಲಭವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>