ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಎತ್ತಿನಹೊಳೆ ಯೋಜನೆ ವಿಚಾರ‌ ಡಿಸಿಎಂ ಜೊತೆ ಚರ್ಚೆ: ಜಿ. ಪರಮೇಶ್ವರ

Published : 30 ಸೆಪ್ಟೆಂಬರ್ 2024, 15:51 IST
Last Updated : 30 ಸೆಪ್ಟೆಂಬರ್ 2024, 15:51 IST
ಫಾಲೋ ಮಾಡಿ
Comments
‘2025ಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು’
‘ತುಮಕೂರಿಗೆ 2025ರ ವೇಳೆಗೆ ಎತ್ತಿನಹೊಳೆ ನೀರು ಹರಿಸಲು ಪ್ರಯತ್ನಿಸಲಾಗುವುದು. ಯೋಜನೆಗೆ ತುಮಕೂರು ಮತ್ತು ಹಾಸನ ಜಿಲ್ಲೆಯಲ್ಲಿ ಅರಣ್ಯ ಭೂಮಿ ಗುರುತಿಸಲಾಗಿದ್ದು, ಅದನ್ನು ನೀರಾವರಿ ಇಲಾಖೆಗೆ ಹಸ್ತಾಂತರಿಸಬೇಕಿದೆ. ಈ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಅರಣ್ಯ ಸಚಿವರ ಜೊತೆಗೂ ಸಮಾಲೋಚನೆ ನಡೆಸಲಾಗುವುದು’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.‌ ‘ಕೊರಟಗೆರೆ ಬಳಿ ಬೈರಗೊಂಡ್ಲು ಜಲಾಶಯದ ನಿರ್ಮಾಣ ಯೋಜನೆಯನ್ನು ಬಿಜೆಪಿ ಅವಧಿಯಲ್ಲಿ ಬದಲಿಸಲಾಗಿತ್ತು. ಈ ಕಾರಣಕ್ಕೆ ಸ್ಥಳ ವೀಕ್ಷಣೆ ಮಾಡಬೇಕಿದೆ. ಇಲ್ಲಿ ದೊಡ್ಡಬಳ್ಳಾಪುರದ ಸ್ವಲ್ಪ ಭಾಗವೂ ಸೇರಿಕೊಳ್ಳುತ್ತದೆ. ಇಲ್ಲಿ ಪರಿಹಾರ ವಿಚಾರದಲ್ಲಿ ವ್ಯಾಜ್ಯಗಳಿವೆ. ರೈತರು ಒಂದೇ ರೀತಿಯ ಪರಿಹಾರ ಕೊಡುವಂತೆ ಆಗ್ರಹಿಸಿದ್ದಾರೆ. ದಸರಾ ನಂತರ ಎತ್ತಿನಹೊಳೆ ಯಿಂದ ಬೈರಗೊಂಡ್ಲುವರೆಗೂ ಸ್ಥಳ ವೀಕ್ಷಣೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT