ವಿಧಾನ ಪರಿಷತ್ನಲ್ಲಿ ಗುರುವಾರ ಕಾಂಗ್ರೆಸ್ ಸದಸ್ಯ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಭೂಮಿಯಲ್ಲೇ ಉದ್ಯಾನ ನಿರ್ಮಿಸಲಾಗುವುದು. ಯೋಜನಾ ವರದಿಯನ್ನು ಅನುಮೋದನೆಗಾಗಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿತ್ತು. ಪರಿಷ್ಕೃತ ಪ್ರಸ್ತಾವ ಸಲ್ಲಿಸುವಂತೆ ಇಲಾಖೆ ಸಲಹೆ ನೀಡಿದೆ. ಅನುಮೋದನೆಯ ನಂತರ ಯೋಜನೆ ಅನುಷ್ಠಾನಕ್ಕೆ ಕಂಪನಿ ಗುರುತಿಸಲಾಗುವುದು ಎಂದರು.