ಬೆಂಗಳೂರು: ನನ್ನ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್ಗೆ ಧನ್ಯವಾದಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ. ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.