‘17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೆಲವರು ಬಿಜೆಪಿಗೆ ಬರುವ ಬಗ್ಗೆ ಮಾಹಿತಿ ಇದೆ. ಆದರೆ, ಎಲ್ಲರೂ ಪಕ್ಷಕ್ಕೆ ಸೇರುತ್ತಾರೆ ಎಂಬ ಕುರಿತು ಸ್ಪಷ್ಟತೆ ಇಲ್ಲ. ವದಂತಿಗಳ ಮೇರೆಗೆ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಹುಟ್ಟಿಕೊಂಡಿದೆ. ಪಕ್ಷ ಕಟ್ಟಿ ಬೆಳೆಸಿದವರು ಆತಂಕಗೊಳ್ಳುವುದು ಸಹಜ ಕೂಡ’ ಎಂದು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.