ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಶನಿವಾರ ಹಂಪಿ ಮೃಗಾಲಯದ ಪ್ರಾಣಿ, ಪಕ್ಷಿಗಳ ಆವರಣ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದಾಗ ಎಲ್ಲ ಕ್ಷೇತ್ರಗಳಿಗೂ ಸಮಾನ ಅನುದಾನ ಬಿಡುಗಡೆಮಾಡಲಾಗುವುದು. ಅನುದಾನದ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು ನಮ್ಮನ್ನು ಹೊಗಳುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಳ್ಳುವುದು ತಪ್ಪಾಗುತ್ತದೆ’ ಎಂದರು.