<p><strong>ಬೆಂಗಳೂರು:</strong> ಬೀದರ್ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ತೀವ್ರಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಮಾಜಿ ಸಚಿವ ರಾಜಶೇಖರ ಪಾಟೀಲ ಬಣ ಬಂಡಾಯ ಎದ್ದಿದೆ.</p>.<p>ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಖಂಡ್ರೆ ವಿರುದ್ಧ ರಾಜಶೇಖರ ಪಾಟೀಲ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದ ಅರಳಿ ನೇತೃತ್ವದಲ್ಲಿ ಮಂಗಳವಾರ ಸಭೆ ಸೇರಿ, ಖಂಡ್ರೆ ಕಾರ್ಯವೈಖರಿಯ ವಿರುದ್ಧ ಹೈಕಮಾಂಡ್ಗೆ ದೂರು ನೀಡಲು ನಿರ್ಧರಿಸಿದ್ದಾರೆ.</p>.<p>ಸಭೆಯ ಬಳಿಕ ಮಾತನಾಡಿದ ರಾಜಶೇಖರ ಪಾಟೀಲ, ‘ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಆದರೆ, ಬೀದರ್ನಲ್ಲಿ ಹೊಂದಾಣಿಕೆಯ ರಾಜಕೀಯ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಉಮಾಕಾಂತ ನಾಗಮಾರಪಲ್ಲಿ ಮತ್ತು ಅಮರ್ ಖಂಡ್ರೆ ಸ್ಪರ್ಧಿಸಿದ್ದರು. ಉಮಾಕಾಂತ ಅವರು ನಮ್ಮ ಬೀಗರಾಗಿದ್ದರೂ ಅಮರ್ ಖಂಡ್ರೆ ಅವರನ್ನು ಗೆಲ್ಲಿಸಿದ್ದೇವೆ. ಆದರೂ ನಮ್ಮನ್ನು ಯಾವುದಕ್ಕೂ ಪರಿಗಣಿಸುವುದಿಲ್ಲ’ ಎಂದು ದೂರಿದರು.</p>.<p>‘ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಎರಡರಲ್ಲಿ ಮಾತ್ರ ಪಕ್ಷ ಗೆದ್ದಿದೆ. ನಾಲ್ಕರಲ್ಲಿ ಸೋಲಾಗಿದೆ. ಗೆದ್ದ ಶಾಸಕರ ಬೇಡಿಕೆಗಳಿಗೂ ಸಚಿವರು ಸ್ಪಂದಿಸುತ್ತಿಲ್ಲ. ಕೆಡಿಪಿ ಸಭೆಯಲ್ಲಿ ಸಚಿವರೊಂದು ಕಡೆ, ಶಾಸಕರು ಮತ್ತೊಂದು ಕಡೆ ಇರುತ್ತಾರೆ. ನಮ್ಮಲ್ಲೇ ಒಗ್ಗಟ್ಟಿಲ್ಲ’ ಎಂದರು.</p>.<p>‘ಯಾರಿಗೂ ಯಾರೂ ಶಾಶ್ವತವಲ್ಲ. ಅಧಿಕಾರ ಯಾವಾಗ ಬೇಕಾದರೂ ಹೋಗಬಹುದು. ಆದರೆ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ಮಾಡುತ್ತೇವೆ’ ಎಂದರು.</p>.<p>ಅರಳಿ ಮಾತನಾಡಿ, ‘ನಾವು ಯಾರ ವಿರುದ್ಧವೂ ಅಲ್ಲ. ಪಕ್ಷ ಒಟ್ಟಿಗೆ ಹೋಗಬೇಕೆಂಬುದಷ್ಟೇ ನಮ್ಮ ಉದ್ದೇಶ’ ಎಂದರು.</p>.<p>‘ಖಂಡ್ರೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮುಂದೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಚುನಾವಣೆಯಲ್ಲಿ ಗೆಲ್ಲಬೇಸಕಾದರೆ ಎಲ್ಲರೂ ಒಟ್ಟಾಗಿ ಹೋಗಬೇಕು. ಆದರೆ, ನಮ್ಮ ಬೇಡಿಕೆಗಳಿಗೆ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಯಾವುದಕ್ಕೂ ನಮ್ಮನ್ನು ಗಣನೆಗೆ ತೆಗೆದುಸಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೀದರ್ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ತೀವ್ರಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಮಾಜಿ ಸಚಿವ ರಾಜಶೇಖರ ಪಾಟೀಲ ಬಣ ಬಂಡಾಯ ಎದ್ದಿದೆ.</p>.<p>ನಗರದ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಖಂಡ್ರೆ ವಿರುದ್ಧ ರಾಜಶೇಖರ ಪಾಟೀಲ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದ ಅರಳಿ ನೇತೃತ್ವದಲ್ಲಿ ಮಂಗಳವಾರ ಸಭೆ ಸೇರಿ, ಖಂಡ್ರೆ ಕಾರ್ಯವೈಖರಿಯ ವಿರುದ್ಧ ಹೈಕಮಾಂಡ್ಗೆ ದೂರು ನೀಡಲು ನಿರ್ಧರಿಸಿದ್ದಾರೆ.</p>.<p>ಸಭೆಯ ಬಳಿಕ ಮಾತನಾಡಿದ ರಾಜಶೇಖರ ಪಾಟೀಲ, ‘ಲೋಕಸಭೆ ಚುನಾವಣೆಯಲ್ಲಿ ಸಾಗರ್ ಖಂಡ್ರೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಆದರೆ, ಬೀದರ್ನಲ್ಲಿ ಹೊಂದಾಣಿಕೆಯ ರಾಜಕೀಯ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಉಮಾಕಾಂತ ನಾಗಮಾರಪಲ್ಲಿ ಮತ್ತು ಅಮರ್ ಖಂಡ್ರೆ ಸ್ಪರ್ಧಿಸಿದ್ದರು. ಉಮಾಕಾಂತ ಅವರು ನಮ್ಮ ಬೀಗರಾಗಿದ್ದರೂ ಅಮರ್ ಖಂಡ್ರೆ ಅವರನ್ನು ಗೆಲ್ಲಿಸಿದ್ದೇವೆ. ಆದರೂ ನಮ್ಮನ್ನು ಯಾವುದಕ್ಕೂ ಪರಿಗಣಿಸುವುದಿಲ್ಲ’ ಎಂದು ದೂರಿದರು.</p>.<p>‘ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಎರಡರಲ್ಲಿ ಮಾತ್ರ ಪಕ್ಷ ಗೆದ್ದಿದೆ. ನಾಲ್ಕರಲ್ಲಿ ಸೋಲಾಗಿದೆ. ಗೆದ್ದ ಶಾಸಕರ ಬೇಡಿಕೆಗಳಿಗೂ ಸಚಿವರು ಸ್ಪಂದಿಸುತ್ತಿಲ್ಲ. ಕೆಡಿಪಿ ಸಭೆಯಲ್ಲಿ ಸಚಿವರೊಂದು ಕಡೆ, ಶಾಸಕರು ಮತ್ತೊಂದು ಕಡೆ ಇರುತ್ತಾರೆ. ನಮ್ಮಲ್ಲೇ ಒಗ್ಗಟ್ಟಿಲ್ಲ’ ಎಂದರು.</p>.<p>‘ಯಾರಿಗೂ ಯಾರೂ ಶಾಶ್ವತವಲ್ಲ. ಅಧಿಕಾರ ಯಾವಾಗ ಬೇಕಾದರೂ ಹೋಗಬಹುದು. ಆದರೆ, ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ಮಾಡುತ್ತೇವೆ’ ಎಂದರು.</p>.<p>ಅರಳಿ ಮಾತನಾಡಿ, ‘ನಾವು ಯಾರ ವಿರುದ್ಧವೂ ಅಲ್ಲ. ಪಕ್ಷ ಒಟ್ಟಿಗೆ ಹೋಗಬೇಕೆಂಬುದಷ್ಟೇ ನಮ್ಮ ಉದ್ದೇಶ’ ಎಂದರು.</p>.<p>‘ಖಂಡ್ರೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಮುಂದೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ಬರಲಿದೆ. ಚುನಾವಣೆಯಲ್ಲಿ ಗೆಲ್ಲಬೇಸಕಾದರೆ ಎಲ್ಲರೂ ಒಟ್ಟಾಗಿ ಹೋಗಬೇಕು. ಆದರೆ, ನಮ್ಮ ಬೇಡಿಕೆಗಳಿಗೆ ಅವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಯಾವುದಕ್ಕೂ ನಮ್ಮನ್ನು ಗಣನೆಗೆ ತೆಗೆದುಸಕೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>