ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದ್ದು, ‘ದಂಪತಿಗೆ ಅನುಕೂಲವಿರುವಂತೆ ಪಾಟಿ ಸವಾಲು ವ್ಯವಸ್ಥೆ ಮಾಡಬೇಕು. ಮುಂದಿನ ನಾಲ್ಕು ತಿಂಗಳಲ್ಲಿ ವಿಚ್ಛೇದನ ಕೋರಿಕೆ ಅರ್ಜಿ ಇತ್ಯರ್ಥಪಡಿಸಬೇಕು‘ ಎಂದು ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.