‘ಕಾಂಗ್ರೆಸ್ನವರು ಹಲವರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲ ಪತ್ರಕರ್ತರು ಉಡುಗೊರೆ ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ಈ ವಿಚಾರದ ಬಗ್ಗೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ಅದನ್ನು ವ್ಯಾಖ್ಯಾನ ಮಾಡಿದ್ದಾರೆ. ಅದನ್ನು ನಾನು ಖಂಡಿಸುತ್ತೇನೆ‘ ಎಂದರು.