<p><strong>ಮಂಗಳೂರು:</strong>ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಶುಕ್ರವಾರ ಮಧ್ಯ ರಾತ್ರಿ 12 ಗಂಟೆಗೆ 11.6 ಮೀಟರ್ ತಲುಪಿದ್ದು, ದಾಖಲೆ ನಿರ್ಮಾಣವಾಗಿದೆ. ಇದರೊಂದಿಗೆ ನದಿ ತೀರದಲ್ಲಿ ಪ್ರವಾಹ ಭೀತಿ ಮತ್ತಷ್ಟು ಹೆಚ್ಚಿದೆ.</p>.<p>ಮಧ್ಯರಾತ್ರಿ ನದಿಯ ನೀರಿನಮಟ್ಟ 11.6 ಮೀಟರ್ ತಲುಪಿತ್ತು. ಶನಿವಾರ ಬೆಳಿಗ್ಗೆ ಹೊತ್ತಿಗೆ 11.4 ಮೀಟರ್ ಗೆ ಇಳಿದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.</p>.<p>1974ರ ಜುಲೈ 25ರಂದು ನೇತ್ರಾವತಿ ನದಿಯ ನೀರಿನ ಮಟ್ಟ 11.6 ಮೀಟರ್ ತಲುಪಿತ್ತು. ಆಗ ಇಡೀ ದಿನ ನೀರಿನ ಮಟ್ಟ ಹಾಗೆಯೇ ಇತ್ತು. ಅದು ಈವರೆಗಿನ ದಾಖಲೆಯಾಗಿತ್ತು.</p>.<p>ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ 31.8 ಮೀಟರ್ ಇದೆ. ತುಂಬೆ ಅಣೆಕಟ್ಟೆ ಸ್ಥಳದಲ್ಲಿ 9.5 ಮೀಟರ್ ತಲುಪಿದ್ದು, ಮಂಗಳೂರು ನಗರಕ್ಕೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.</p>.<p>ಪ್ರವಾಹ ಉಂಟಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬಂಟ್ವಾಳ ತಾಲ್ಲೂಕಿನಲ್ಲಿ 200 ಮತ್ತು ಬೆಳ್ತಂಗಡಿ ತಾಲ್ಲೂಕಿನಲ್ಲಿ 300 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong>ಬಂಟ್ವಾಳದಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ ಶುಕ್ರವಾರ ಮಧ್ಯ ರಾತ್ರಿ 12 ಗಂಟೆಗೆ 11.6 ಮೀಟರ್ ತಲುಪಿದ್ದು, ದಾಖಲೆ ನಿರ್ಮಾಣವಾಗಿದೆ. ಇದರೊಂದಿಗೆ ನದಿ ತೀರದಲ್ಲಿ ಪ್ರವಾಹ ಭೀತಿ ಮತ್ತಷ್ಟು ಹೆಚ್ಚಿದೆ.</p>.<p>ಮಧ್ಯರಾತ್ರಿ ನದಿಯ ನೀರಿನಮಟ್ಟ 11.6 ಮೀಟರ್ ತಲುಪಿತ್ತು. ಶನಿವಾರ ಬೆಳಿಗ್ಗೆ ಹೊತ್ತಿಗೆ 11.4 ಮೀಟರ್ ಗೆ ಇಳಿದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.</p>.<p>1974ರ ಜುಲೈ 25ರಂದು ನೇತ್ರಾವತಿ ನದಿಯ ನೀರಿನ ಮಟ್ಟ 11.6 ಮೀಟರ್ ತಲುಪಿತ್ತು. ಆಗ ಇಡೀ ದಿನ ನೀರಿನ ಮಟ್ಟ ಹಾಗೆಯೇ ಇತ್ತು. ಅದು ಈವರೆಗಿನ ದಾಖಲೆಯಾಗಿತ್ತು.</p>.<p>ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ 31.8 ಮೀಟರ್ ಇದೆ. ತುಂಬೆ ಅಣೆಕಟ್ಟೆ ಸ್ಥಳದಲ್ಲಿ 9.5 ಮೀಟರ್ ತಲುಪಿದ್ದು, ಮಂಗಳೂರು ನಗರಕ್ಕೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ.</p>.<p>ಪ್ರವಾಹ ಉಂಟಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬಂಟ್ವಾಳ ತಾಲ್ಲೂಕಿನಲ್ಲಿ 200 ಮತ್ತು ಬೆಳ್ತಂಗಡಿ ತಾಲ್ಲೂಕಿನಲ್ಲಿ 300 ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>