<p><strong>ಬೆಂಗಳೂರು</strong>: ‘ಕುಮಾರಸ್ವಾಮಿ ಏನೇನೋ ಮಾತನಾಡಿ ತಮ್ಮ ಗೌರವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಜನ ಅವರನ್ನು ನೋಡಿ ನಗುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಟೆಂಟ್ಗಳಲ್ಲಿ ನೀಲಿಚಿತ್ರಗಳನ್ನು ಪ್ರದರ್ಶಿಸುತ್ತಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೆ ಆರೋಪಿಸಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ ಹತಾಶೆಯು ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ’ ಎಂದರು.</p>.<p>‘ಡಿ.ಕೆ. ಶಿವಕುಮಾರ್ ಹೀಗೆ ಮಾಡಿದ್ದರೇ ಎಂದು ಕನಕಪುರದ ಜನರನ್ನು ಕುಮಾರಸ್ವಾಮಿ ಕೇಳಲಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ಕ್ಷೇತ್ರದ ಜನರು ಹಾಗೂ ನಿಮ್ಮ (ಜೆಡಿಎಸ್) ಕಾರ್ಯಕರ್ತರು ಹೇಳಿದರೆ, ಈ ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಆಗ ನೀವೇನು (ಕುಮಾರಸ್ವಾಮಿ) ಮಾಡುತ್ತೀರಾ’ ಎಂದು ಪ್ರಶ್ನಿಸಿದರು.</p>.<p>‘ಕುಮಾರಸ್ವಾಮಿಯವರು, ಅವರ ತಂದೆ ನನ್ನ ವಿರುದ್ದ ಚುನಾವಣೆಗೆ ನಿಂತಿದ್ದಾಗ ಯಾಕೆ ಈ ವಿಚಾರ ಎತ್ತಲಿಲ್ಲ? ಈಗ ಏಕೆ ಈ ರೀತಿ ಮಾತನಾಡುತ್ತಿದ್ದಾರೆ. ನಾನು ಇಂದಿರಾ ಗಾಂಧಿ ಅವರ ನೆನಪಿನಲ್ಲಿ ಟೆಂಟ್ಗಳನ್ನು ತೆರೆದಿದ್ದವನು’ ಎಂದು ತಿರುಗೇಟು ನೀಡಿದರು. </p>.<p>‘ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಭಿತ್ತಿಪತ್ರಗಳನ್ನು ಹಾಕಿದ್ದಾರೆ’ ಎಂದಾಗ ‘ಯಾರು ಹಾಕಿದ್ದರೂ ತಪ್ಪೇ. ನಾನು ಇಂತಹ ಕೀಳುಮಟ್ಟದ ರಾಜಕಾರಣಕ್ಕೆ ಇಳಿಯುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕುಮಾರಸ್ವಾಮಿ ಏನೇನೋ ಮಾತನಾಡಿ ತಮ್ಮ ಗೌರವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಜನ ಅವರನ್ನು ನೋಡಿ ನಗುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಟೆಂಟ್ಗಳಲ್ಲಿ ನೀಲಿಚಿತ್ರಗಳನ್ನು ಪ್ರದರ್ಶಿಸುತ್ತಿದ್ದರು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮತ್ತೆ ಆರೋಪಿಸಿರುವ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ ಹತಾಶೆಯು ಅವರನ್ನು ಈ ರೀತಿಯಾಗಿ ಮಾತನಾಡಿಸುತ್ತಿದೆ’ ಎಂದರು.</p>.<p>‘ಡಿ.ಕೆ. ಶಿವಕುಮಾರ್ ಹೀಗೆ ಮಾಡಿದ್ದರೇ ಎಂದು ಕನಕಪುರದ ಜನರನ್ನು ಕುಮಾರಸ್ವಾಮಿ ಕೇಳಲಿ. ನಾನು ಈ ರೀತಿಯ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದೆ ಎಂದು ಕ್ಷೇತ್ರದ ಜನರು ಹಾಗೂ ನಿಮ್ಮ (ಜೆಡಿಎಸ್) ಕಾರ್ಯಕರ್ತರು ಹೇಳಿದರೆ, ಈ ಕೂಡಲೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಆಗ ನೀವೇನು (ಕುಮಾರಸ್ವಾಮಿ) ಮಾಡುತ್ತೀರಾ’ ಎಂದು ಪ್ರಶ್ನಿಸಿದರು.</p>.<p>‘ಕುಮಾರಸ್ವಾಮಿಯವರು, ಅವರ ತಂದೆ ನನ್ನ ವಿರುದ್ದ ಚುನಾವಣೆಗೆ ನಿಂತಿದ್ದಾಗ ಯಾಕೆ ಈ ವಿಚಾರ ಎತ್ತಲಿಲ್ಲ? ಈಗ ಏಕೆ ಈ ರೀತಿ ಮಾತನಾಡುತ್ತಿದ್ದಾರೆ. ನಾನು ಇಂದಿರಾ ಗಾಂಧಿ ಅವರ ನೆನಪಿನಲ್ಲಿ ಟೆಂಟ್ಗಳನ್ನು ತೆರೆದಿದ್ದವನು’ ಎಂದು ತಿರುಗೇಟು ನೀಡಿದರು. </p>.<p>‘ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರು ಭಿತ್ತಿಪತ್ರಗಳನ್ನು ಹಾಕಿದ್ದಾರೆ’ ಎಂದಾಗ ‘ಯಾರು ಹಾಕಿದ್ದರೂ ತಪ್ಪೇ. ನಾನು ಇಂತಹ ಕೀಳುಮಟ್ಟದ ರಾಜಕಾರಣಕ್ಕೆ ಇಳಿಯುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>