ಅಳಲು ತೋಡಿಕೊಂಡ ರೂಪಕಲಾ ಶಶಿಧರ್
ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರು ಪೊಲೀಸರು ನೀಡಿದ ಕಿರುಕುಳ ಹೇಳಿಕೊಂಡು ಡಿ.ಕೆ. ಶಿವಕುಮಾರ್ ಎದುರು ಅಳಲು ತೋಡಿಕೊಂಡರು. ಶಾಸಕಾಂಗ ಸಭೆ ಬಳಿಕ ಶಿವಕುಮಾರ್ ಮುಂದೆ ಕಣ್ಣೀರು ಹಾಕಿ ಸಮಸ್ಯೆ ಹೇಳಿಕೊಂಡ ರೂಪಕಲಾ, ‘ಚುನಾವಣೆ ಸಮಯದಲ್ಲಿ ಪೊಲೀಸರು ನನಗೆ ಮತ್ತು ನಮ್ಮ ಕಾರ್ಯಕರ್ತರಿಗೆ ಸಾಕಷ್ಟು ಕಿರುಕುಳ ನೀಡಿದ್ದಾರೆ. ಸುಳ್ಳು ಕೇಸ್ ದಾಖಲು ಮಾಡಿ ಕಿರುಕುಳ ನೀಡಿದ್ದಾರೆ. ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಆಗಬೇಕು. ಪೊಲೀಸರು ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ವರ್ತಿಸಿದ್ದಾರೆ’ ಎಂದು ಆರೋಪಿಸಿದರು