ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ದೂರಿನ ವಿಚಾರಣೆ ನಗರದ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿಗುರುವಾರ ನಡೆಯಲಿದೆ.
ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಶಿವಕುಮಾರ್ ವಿರುದ್ಧ ಐಟಿ ಕಾಯಿದೆ ಸೆಕ್ಷನ್ 277, 278, 193, 199, ಹಾಗೂ 120(ಬಿ) ಅಡಿ ದೂರು ದಾಖಲಿಸಲಾಗಿತ್ತು.
ಕೇಸ್ ವಿಚಾರಣೆ ನಡೆಸಿದ್ದ ನ್ಯಾ.ಎಂ.ಎಸ್. ಆಳ್ವಾ ಅವರು ಡಿ.ಕೆ. ಶಿವಕುಮಾರ್ ಅವರನ್ನು ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.
ಶಿವಕುಮಾರ್ ಜೊತೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರಗೂ ಸಮನ್ಸ್ ಜಾರಿಯಾಗಿತ್ತು. ಆದರೆಡಿ.ಕೆ.ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ವಿರುದ್ಧದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಹಿನ್ನಲೆಯಲ್ಲಿ ಸಚಿನ್ ನಾರಾಯಣ್ ಹೊರತುಪಡಿಸಿ ಉಳಿದ ಆರೋಪಿಗಳು ಇಂದು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.