<p>ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ ಸಂಪುಟಲ್ಲಿ ಪ್ರಮುಖ ಸಮುದಾಯಗಳಿಗೆ ಮಣೆ ಹಾಕಲಾಗಿದೆ. ‘ಅಹಿಂದ’ಕ್ಕೆ ಆದ್ಯತೆ ನೀಡಲಾಗಿದೆ.</p><p>ಸಂಪುಟದಲ್ಲಿ ನಾಲ್ವರು ದಲಿತರು, ಒಬ್ಬ ಒಕ್ಕಲಿಗ, ಮೂವರು ಲಿಂಗಾಯತ, ತಲಾ ಇಬ್ಬರು ಅಲ್ಪಸಂಖ್ಯಾತ, ಕುರುಬ ಸಮುದಾಯದವರು, ಒಬ್ಬರು ರೆಡ್ಡಿ ಸಮುದಾಯದವರಿಗೆ ಅವಕಾಶ ನೀಡಲಾಗಿದೆ. </p><p>ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಕ್ಕಲಿಗ. ದಲಿತ ವರ್ಗದವರ ಪೈಕಿ ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಬಲಗೈ ಸಮುದಾಯದವರು. ಕೆ.ಎಚ್.ಮುನಿಯಪ್ಪ ಎಡಗೈ ಸಮುದಾಯಕ್ಕೆ ಸೇರಿದವರು.</p><p>ಲಿಂಗಾಯತ ಸಮುದಾಯದಿಂದ ಎಂ.ಬಿ. ಪಾಟೀಲ, ಶರಣಪ್ರಕಾಶ್ ಪಾಟೀಲ ಮತ್ತು ಈಶ್ವರ್ಖಂಡ್ರೆ ಅವರಿಗೆ ಅವಕಾಶ ನೀಡಲಾಗಿದೆ.</p><p>ಪರಿಶಿಷ್ಟ ಪಂಗಡದಿಂದ ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನ ದಕ್ಕಿದೆ. ಒಕ್ಕಲಿಗ ಸಮುದಾಯದಲ್ಲಿ ಕೃಷ್ಣಬೈರೇಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.</p><p>ಅಲ್ಪಸಂಖ್ಯಾತ ಸಮುದಾಯದವರಲ್ಲಿ ಯು.ಟಿ.ಖಾದರ್ (ಮುಸ್ಲಿಂ) ಮತ್ತು ಕೆ.ಜೆ.ಜಾರ್ಜ್ (ಕ್ರೈಸ್ತ) ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.</p><p>ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಕುರುಬ ಸಮುದಾಯದಿಂದ ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ ಸಂಪುಟಲ್ಲಿ ಪ್ರಮುಖ ಸಮುದಾಯಗಳಿಗೆ ಮಣೆ ಹಾಕಲಾಗಿದೆ. ‘ಅಹಿಂದ’ಕ್ಕೆ ಆದ್ಯತೆ ನೀಡಲಾಗಿದೆ.</p><p>ಸಂಪುಟದಲ್ಲಿ ನಾಲ್ವರು ದಲಿತರು, ಒಬ್ಬ ಒಕ್ಕಲಿಗ, ಮೂವರು ಲಿಂಗಾಯತ, ತಲಾ ಇಬ್ಬರು ಅಲ್ಪಸಂಖ್ಯಾತ, ಕುರುಬ ಸಮುದಾಯದವರು, ಒಬ್ಬರು ರೆಡ್ಡಿ ಸಮುದಾಯದವರಿಗೆ ಅವಕಾಶ ನೀಡಲಾಗಿದೆ. </p><p>ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಕ್ಕಲಿಗ. ದಲಿತ ವರ್ಗದವರ ಪೈಕಿ ಜಿ. ಪರಮೇಶ್ವರ, ಪ್ರಿಯಾಂಕ್ ಖರ್ಗೆ ಬಲಗೈ ಸಮುದಾಯದವರು. ಕೆ.ಎಚ್.ಮುನಿಯಪ್ಪ ಎಡಗೈ ಸಮುದಾಯಕ್ಕೆ ಸೇರಿದವರು.</p><p>ಲಿಂಗಾಯತ ಸಮುದಾಯದಿಂದ ಎಂ.ಬಿ. ಪಾಟೀಲ, ಶರಣಪ್ರಕಾಶ್ ಪಾಟೀಲ ಮತ್ತು ಈಶ್ವರ್ಖಂಡ್ರೆ ಅವರಿಗೆ ಅವಕಾಶ ನೀಡಲಾಗಿದೆ.</p><p>ಪರಿಶಿಷ್ಟ ಪಂಗಡದಿಂದ ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನ ದಕ್ಕಿದೆ. ಒಕ್ಕಲಿಗ ಸಮುದಾಯದಲ್ಲಿ ಕೃಷ್ಣಬೈರೇಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.</p><p>ಅಲ್ಪಸಂಖ್ಯಾತ ಸಮುದಾಯದವರಲ್ಲಿ ಯು.ಟಿ.ಖಾದರ್ (ಮುಸ್ಲಿಂ) ಮತ್ತು ಕೆ.ಜೆ.ಜಾರ್ಜ್ (ಕ್ರೈಸ್ತ) ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.</p><p>ರೆಡ್ಡಿ ಸಮುದಾಯದ ರಾಮಲಿಂಗಾರೆಡ್ಡಿ, ಕುರುಬ ಸಮುದಾಯದಿಂದ ಬೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>