ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕಣ್ಣೀರು ಕಥನಗಳ ಬಹಿರಂಗ ಚರ್ಚೆ: ಕೇಂದ್ರ ಸಚಿವ ಕುಮಾರಸ್ವಾಮಿಗೆ ಡಿಕೆಶಿ ಆಹ್ವಾನ

Published : 6 ಜೂನ್ 2025, 15:40 IST
Last Updated : 6 ಜೂನ್ 2025, 15:40 IST
ಫಾಲೋ ಮಾಡಿ
Comments
ಸಂಭ್ರಮಾಚರಣೆ ವೇಳೆ ನಡೆದ ದುರಂತದ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ವಿರೋಧ ಪಕ್ಷಗಳು ಕೇಳುತ್ತಿವೆ. ರಾಜೀನಾಮೆ ನೀಡಿ ಅವರ ಆಸೆ ಈಡೇರಿಸೋಣ
ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ
‘ಕುಮಾರಸ್ವಾಮಿಗೆ ನನ್ನ ಮೇಲೆ ಲವ್‌’
‘ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ನನ್ನನ್ನು ಕಂಡರೆ ಬಹಳ ಪ್ರೀತಿ. ಅದಕ್ಕಾಗಿಯೇ ನನ್ನ ರಾಜೀನಾಮೆ ಕೇಳುತ್ತಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು. ‘ನನ್ನ ಹಾಗೂ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ಬಿಜೆಪಿ–ಜೆಡಿಎಸ್‌ ಹೇಳಿವೆ. ಅವರು ಲೋಕಸಭಾ ಚುನಾವಣೆಯ ನಂತರ ಜಂಟಿಯಾಗಿಯೇ ಇದ್ದಾರೆ. ಇನ್ನೂ 10 ಜನರನ್ನು ಹೆಚ್ಚಿಗೆ ಸೇರಿಸಿಕೊಂಡು ಹೋರಾಟ ಮಾಡಲಿ. ತೆರೆಮರೆಯಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂಬುದು ನಮಗೂ ಗೊತ್ತಿದೆ’ ಎಂದರು.
ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
‘ಕಾಲ್ತುಳಿತದ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಮತ್ತು ರಾಜಕೀಯಕ್ಕಾಗಿ ಅವರು ಮಾತನಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ’ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ‘ಈ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಯಾರು ಜವಾಬ್ದಾರರು ಇದ್ದಾರೆ ಯಾರು ಲೋಪ ಎಸಗಿದ್ದಾರೆ ಅಂತಹವರ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT