<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ. ಆ ಬಗ್ಗೆ ನಾನು ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ವಿಷಯ ದೊಡ್ಡದು ಮಾಡುತ್ತಿದ್ದಾರೆ’ ಎಂದರು.</p><p>ತುಮಕೂರು ಭೇಟಿ ವಿಚಾರಕ್ಕೆ, ‘ಎತ್ತಿನಹೊಳೆ ಯೋಜನೆಯ ಕೆಲಸ ಆಗಬೇಕು. ಇವತ್ತು ಗುತ್ತಿಗೆದಾರರ ಸಭೆ ಕರೆದಿದ್ದೆ. ಆದರೆ, ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದು, ಹೀಗಾಗಿ ಸಭೆ ಮುಂದಕ್ಕೆ ಹಾಕಿದ್ದೇವೆ. ಏನು ಸಮಸ್ಯೆ ಇದೆ ಎಂದು ನೋಡಲು ಹೋಗುತ್ತೇನೆ. ತಾಂತ್ರಿಕ ಸಮಸ್ಯೆ ಬಗ್ಗೆ ಪರಿಶೀಲಿಸುತ್ತೇನೆ. ಜನರ, ಶಾಸಕರ ಅಭಿಪ್ರಾಯ ಕೇಳುತ್ತೇನೆ’ ಎಂದು ತಿಳಿಸಿದರು.</p><p>ಶಾಸಕ ಬಿ.ಆರ್. ಪಾಟೀಲ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ಕೇಳಬೇಕಿತ್ತು. ಅವರಿಗೆ ಕರೆ ಮಾಡಿ ಕರೆಸಿದ್ದೆ. ಹೀಗಾಗಿ ಅವರು ಬಂದಿದ್ದರು. ಅವರ ವಿಚಾರ ಏನಿದೆ ಎಂಬುದನ್ನು ಹೇಳಿದ್ದಾರೆ’ ಎಂದರು‘</p><p>‘ಮುಖ್ಯಮಂತ್ರಿ, ಸಚಿವ ಜಮೀರ್ ಜೊತೆ ನಾನು ಮಾತನಾಡುತ್ತೇನೆ. ವಾಸ್ತವಾಂಶ ಪರಿಶೀಲನೆ ಮಾಡುತ್ತೇನೆ. ನಮ್ಮ ಪಕ್ಷದ ವರಿಷ್ಠರು ಬರುತ್ತಿದ್ದಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ವಾಸ್ತವಾಂಶದ ಬಗ್ಗೆ ಮಾತನಾಡುತ್ತಾರೆೆ’ ಎಂದರು.</p><p>ಜೆಡಿಎಸ್ ನಾಯಕ ಸುರೇಶ್ ಬಾಬು ಪತ್ರ ಬರೆದ ವಿಚಾರವಾಗಿ ಮಾತನಾಡಿ, ‘ಸುರೇಶ್ ಬಾಬು ಅವರು ತಮ್ಮ ಪಕ್ಷದ ಬಗ್ಗೆ ನೋಡಿಕೊಳ್ಳಲಿ’ ಎಂದರು.</p>.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರೇಣುಕಾಚಾರ್ಯ ಬೆಂಬಲ: MLA ಶಿವಗಂಗಾ.ವರ್ಷಾಂತ್ಯದಲ್ಲಿ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆ: ಸತೀಶ ಜಾರಕಿಹೊಳಿ ಸುಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ. ಆ ಬಗ್ಗೆ ನಾನು ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ವಿಷಯ ದೊಡ್ಡದು ಮಾಡುತ್ತಿದ್ದಾರೆ’ ಎಂದರು.</p><p>ತುಮಕೂರು ಭೇಟಿ ವಿಚಾರಕ್ಕೆ, ‘ಎತ್ತಿನಹೊಳೆ ಯೋಜನೆಯ ಕೆಲಸ ಆಗಬೇಕು. ಇವತ್ತು ಗುತ್ತಿಗೆದಾರರ ಸಭೆ ಕರೆದಿದ್ದೆ. ಆದರೆ, ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದು, ಹೀಗಾಗಿ ಸಭೆ ಮುಂದಕ್ಕೆ ಹಾಕಿದ್ದೇವೆ. ಏನು ಸಮಸ್ಯೆ ಇದೆ ಎಂದು ನೋಡಲು ಹೋಗುತ್ತೇನೆ. ತಾಂತ್ರಿಕ ಸಮಸ್ಯೆ ಬಗ್ಗೆ ಪರಿಶೀಲಿಸುತ್ತೇನೆ. ಜನರ, ಶಾಸಕರ ಅಭಿಪ್ರಾಯ ಕೇಳುತ್ತೇನೆ’ ಎಂದು ತಿಳಿಸಿದರು.</p><p>ಶಾಸಕ ಬಿ.ಆರ್. ಪಾಟೀಲ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಪಕ್ಷದ ಅಧ್ಯಕ್ಷನಾಗಿ ವಾಸ್ತವಾಂಶ ಕೇಳಬೇಕಿತ್ತು. ಅವರಿಗೆ ಕರೆ ಮಾಡಿ ಕರೆಸಿದ್ದೆ. ಹೀಗಾಗಿ ಅವರು ಬಂದಿದ್ದರು. ಅವರ ವಿಚಾರ ಏನಿದೆ ಎಂಬುದನ್ನು ಹೇಳಿದ್ದಾರೆ’ ಎಂದರು‘</p><p>‘ಮುಖ್ಯಮಂತ್ರಿ, ಸಚಿವ ಜಮೀರ್ ಜೊತೆ ನಾನು ಮಾತನಾಡುತ್ತೇನೆ. ವಾಸ್ತವಾಂಶ ಪರಿಶೀಲನೆ ಮಾಡುತ್ತೇನೆ. ನಮ್ಮ ಪಕ್ಷದ ವರಿಷ್ಠರು ಬರುತ್ತಿದ್ದಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ವಾಸ್ತವಾಂಶದ ಬಗ್ಗೆ ಮಾತನಾಡುತ್ತಾರೆೆ’ ಎಂದರು.</p><p>ಜೆಡಿಎಸ್ ನಾಯಕ ಸುರೇಶ್ ಬಾಬು ಪತ್ರ ಬರೆದ ವಿಚಾರವಾಗಿ ಮಾತನಾಡಿ, ‘ಸುರೇಶ್ ಬಾಬು ಅವರು ತಮ್ಮ ಪಕ್ಷದ ಬಗ್ಗೆ ನೋಡಿಕೊಳ್ಳಲಿ’ ಎಂದರು.</p>.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರೇಣುಕಾಚಾರ್ಯ ಬೆಂಬಲ: MLA ಶಿವಗಂಗಾ.ವರ್ಷಾಂತ್ಯದಲ್ಲಿ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆ: ಸತೀಶ ಜಾರಕಿಹೊಳಿ ಸುಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>