<p><strong>ಶ್ರೀರಂಗಪಟ್ಟಣ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ನಡೆದಿದೆ.</p><p>ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾಗ, ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.</p><p>ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ</p><p>ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ .ಡಿಸಿಎಂ ಡಿ.ಕೆ.ಶಿವಕುಮಾರ್ ಗುರಿ ತಲುಪುತ್ತಾರೆಯೇ? ಜನ್ಮ ಕುಂಡಲಿ ಏನು ಹೇಳುತ್ತದೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ನಡೆದಿದೆ.</p><p>ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾಗ, ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.</p><p>ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ</p><p>ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ .ಡಿಸಿಎಂ ಡಿ.ಕೆ.ಶಿವಕುಮಾರ್ ಗುರಿ ತಲುಪುತ್ತಾರೆಯೇ? ಜನ್ಮ ಕುಂಡಲಿ ಏನು ಹೇಳುತ್ತದೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>