ರಾಜ್ಯದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಬದ್ಧ ಎಂಬುದಾಗಿ ಮಹಾರಾಷ್ಟ್ರ ವಿಧಾನಮಂಡಲದಲ್ಲಿ ನಿರ್ಣಯ ಕೈಗೊಂಡಿರುವ ಕುರಿತು ಬುಧವಾರ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ‘ರಾಜ್ಯದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆ ಇಲ್ಲ ಎಂಬ ಪೊಳ್ಳು ಹೇಳಿಕೆಗಳನ್ನು ನೀಡುವುದನ್ನು ಮುಖ್ಯಮಂತ್ರಿ ನಿಲ್ಲಿಸಲಿ. ಆ ವಿಚಾರದಲ್ಲಿ ನಿಜವಾದ ಬದ್ಧತೆ ತೋರಿಸಲಿ’ ಎಂದು ಆಗ್ರಹಿಸಿದ್ದಾರೆ.