<p><strong>ಮೈಸೂರು:</strong> ‘ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದರೂ, ಆ ಹಣ ನೆರೆಪೀಡಿತ ಜಿಲ್ಲೆಗಳಿಗೆ ತಲುಪಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಹುಣಸೂರಿನ ನೆರೆಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿ, ‘ನೆರೆ ಪೀಡಿತ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಪಕ್ಷವು ಐದು ತಂಡಗಳನ್ನು ರಚಿಸಿದ್ದು, ರಾಜ್ಯ ಪ್ರವಾಸ ನಡೆಸಲಿದೆ. ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು’ ಎಂದರು.</p>.<p>ಕಳೆದ ವರ್ಷ ನೆರೆ ಪರಿಹಾರದ ರೂಪದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಅನುದಾನವನ್ನು ‘ಪ್ರಸಾದ’ ಎಂದು ಸ್ವೀಕರಿಸಿದ್ದ ಮುಖ್ಯಮಂತ್ರಿ ಹೆಚ್ಚಿನ ಪರಿಹಾರಕ್ಕೆ ಒತ್ತಾಯಿಸಿರಲಿಲ್ಲ ಎಂದು ದೂರಿದರು.</p>.<p class="Subhead">ಭಿನ್ನಾಭಿಪ್ರಾಯವಿಲ್ಲ: ‘ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಪಕ್ಷ ಸಂಘಟನೆ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಕಂದಾಯ ಸಚಿವ ಆರ್.ಅಶೋಕ ಏನೇನೋ ಹೇಳಲಿ ಬಿಡಿ ಪಾಪ. ಅವರಿಗೆ ನಮ್ಮ ಬಗ್ಗೆ ಬಹಳ ಕಾಳಜಿ ಇದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನೆರೆ ಪರಿಹಾರ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದರೂ, ಆ ಹಣ ನೆರೆಪೀಡಿತ ಜಿಲ್ಲೆಗಳಿಗೆ ತಲುಪಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಹುಣಸೂರಿನ ನೆರೆಪೀಡಿತ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿ ಮಾತನಾಡಿ, ‘ನೆರೆ ಪೀಡಿತ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಪಕ್ಷವು ಐದು ತಂಡಗಳನ್ನು ರಚಿಸಿದ್ದು, ರಾಜ್ಯ ಪ್ರವಾಸ ನಡೆಸಲಿದೆ. ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗುವುದು’ ಎಂದರು.</p>.<p>ಕಳೆದ ವರ್ಷ ನೆರೆ ಪರಿಹಾರದ ರೂಪದಲ್ಲಿ ಕೇಂದ್ರ ಸರ್ಕಾರ ನೀಡಿದ್ದ ಅನುದಾನವನ್ನು ‘ಪ್ರಸಾದ’ ಎಂದು ಸ್ವೀಕರಿಸಿದ್ದ ಮುಖ್ಯಮಂತ್ರಿ ಹೆಚ್ಚಿನ ಪರಿಹಾರಕ್ಕೆ ಒತ್ತಾಯಿಸಿರಲಿಲ್ಲ ಎಂದು ದೂರಿದರು.</p>.<p class="Subhead">ಭಿನ್ನಾಭಿಪ್ರಾಯವಿಲ್ಲ: ‘ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಪಕ್ಷ ಸಂಘಟನೆ ಮಾಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಕಂದಾಯ ಸಚಿವ ಆರ್.ಅಶೋಕ ಏನೇನೋ ಹೇಳಲಿ ಬಿಡಿ ಪಾಪ. ಅವರಿಗೆ ನಮ್ಮ ಬಗ್ಗೆ ಬಹಳ ಕಾಳಜಿ ಇದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>