<p><strong>ಬೆಂಗಳೂರು</strong>: ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿಯಾಗಿದೆ. ಜೂನ್ 3ರಂದು ಅವರು ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ವರ್ಷಗಳ ಸತತ ಪ್ರಯತ್ನದ ಬಳಿಕ ಸಿಎಂ ಗಾದಿ ಏರುತ್ತಿರುವ ಡಿಕೆಶಿ ದೇಶದ ಅತ್ಯಂತ ಸಿರಿವಂತ ಸಿಎಂ ಖ್ಯಾತಿಗೂ ಪಾತ್ರರಾಗಲಿದ್ದಾರೆ.</p><p>ಚುನಾವಣೆ ಸಂದರ್ಭ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಡಿಕೆಶಿ ಆಸ್ತಿಯು ಸದ್ಯದ ದೇಶದ ಶ್ರೀಮಂತ ಸಿಎಂ ಎನಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗಿಂತ ಹೆಚ್ಚಾಗಿದೆ. ಹೀಗಾಗಿ, ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ.</p><p>2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅವರ ಅಧಿಕೃತ ದಾಖಲೆಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರ ಒಟ್ಟು ನಿವ್ವಳ ಮೌಲ್ಯ ₹1,413 ಕೋಟಿಗಿಂತ ಹೆಚ್ಚು. ₹14 ಕೋಟಿಗೂ ಹೆಚ್ಚು ಬ್ಯಾಂಕ್ ಬ್ಯಾಲೆನ್ಸ್, ಹೊಂದಿದ್ದಾರೆ. </p><p>ಒಟ್ಟು ₹273 ಕೋಟಿ ಸ್ಥಿರಾಸ್ತಿ ಮತ್ತು ₹1,140 ಕೋಟಿ ಚರಾಸ್ತಿ ಹೊಂದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.</p><p>₹931 ಕೋಟಿ ಆಸ್ತಿ ಹೊಂದಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈವರೆಗೆ ದೇಶದ ಅತ್ಯಂತ ಶ್ರೀಮಂತ ಸಿಎಂ ಎನಿಸಿದ್ದರು. ಈಗ ಆ ಸ್ಥಾನಕ್ಕೆ ಡಿಕೆ ಲಗ್ಗೆ ಇಡುತ್ತಿದ್ದಾರೆ. </p><p>ಇನ್ನೂ ಇತ್ತೀಚೆಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿ ಅಭೂತಪೂರ್ವ ಗೆಲುವು ಸಾಧಿಸುವುದರೊಂದಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಟಿವಿಕೆ ಅಧ್ಯಕ್ಷ ಸಿ ಜೋಸೆಫ್ ವಿಜಯ್ ಅವರು ಮೂರನೇ ಸ್ಥಾನದಲ್ಲಿದ್ದು, ಅವರ ಒಟ್ಟು ಆಸ್ತಿ ಮೌಲ್ಯ ₹648 ಕೋಟಿಯಾಗಿದೆ.</p><p>ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ₹332 ಕೋಟಿ ಮೌಲ್ಯದ ಆಸ್ತಿ ಮೂಲಕ 4ನೇ ಸ್ಥಾನದಲ್ಲಿದ್ದಾರೆ. ನಾಗಾಲ್ಯಾಂಡ್ ಸಿಎಂ ನೈಫಿಯು ರಿಯೊ ₹46 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು ನಂತರದ ಸ್ಥಾನದಲ್ಲಿದ್ದಾರೆ.</p><p>ಉಳಿದಂತೆ, ₹42 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ 6ನೇ ಸ್ಥಾನ, ಪುದುಚೆರಿ ಸಿಎಂ ಎನ್. ರಂಗಸಾಮಿ (₹38 ಕೋಟಿ) 7ನೇ ಸ್ಥಾನ, ತೆಲಂಗಾಣ ಮುಖ್ಯಮಂತ್ರಿ ಅನುಮುಲ ರೇವಂತ್ ರೆಡ್ಡಿ (₹30 ಕೋಟಿ) 8ನೇ ಸ್ಥಾನ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (₹24 ಕೋಟಿ) 9ನೇ ಸ್ಥಾನ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ (₹23 ಕೋಟಿ) 10ನೇ ಸ್ಥನದಲ್ಲಿದ್ದಾರೆ.</p> .ಅನ್ನಭಾಗ್ಯ ಯೋಜನೆಗೆ ಸಿದ್ದರಾಮಯ್ಯರನ್ನು ಪ್ರೇರೇಪಿಸಿದ್ದ ಹುಟ್ಟೂರಿನ ಆ ಘಟನೆಗಳು...ಡಿಕೆಶಿ ಒಂದು ಬಾರಿಯ ಸಿಎಂ ಅಲ್ಲ, ದೀರ್ಘಾವಧಿ ಅಧಿಕಾರದಲ್ಲಿರುತ್ತಾರೆ: ಜ್ಯೋತಿಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರಕ್ಕೆ ಸಮಯ ನಿಗದಿಯಾಗಿದೆ. ಜೂನ್ 3ರಂದು ಅವರು ಲೋಕಭವನದ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 3 ವರ್ಷಗಳ ಸತತ ಪ್ರಯತ್ನದ ಬಳಿಕ ಸಿಎಂ ಗಾದಿ ಏರುತ್ತಿರುವ ಡಿಕೆಶಿ ದೇಶದ ಅತ್ಯಂತ ಸಿರಿವಂತ ಸಿಎಂ ಖ್ಯಾತಿಗೂ ಪಾತ್ರರಾಗಲಿದ್ದಾರೆ.</p><p>ಚುನಾವಣೆ ಸಂದರ್ಭ ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಡಿಕೆಶಿ ಆಸ್ತಿಯು ಸದ್ಯದ ದೇಶದ ಶ್ರೀಮಂತ ಸಿಎಂ ಎನಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗಿಂತ ಹೆಚ್ಚಾಗಿದೆ. ಹೀಗಾಗಿ, ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ.</p><p>2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅವರ ಅಧಿಕೃತ ದಾಖಲೆಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರ ಒಟ್ಟು ನಿವ್ವಳ ಮೌಲ್ಯ ₹1,413 ಕೋಟಿಗಿಂತ ಹೆಚ್ಚು. ₹14 ಕೋಟಿಗೂ ಹೆಚ್ಚು ಬ್ಯಾಂಕ್ ಬ್ಯಾಲೆನ್ಸ್, ಹೊಂದಿದ್ದಾರೆ. </p><p>ಒಟ್ಟು ₹273 ಕೋಟಿ ಸ್ಥಿರಾಸ್ತಿ ಮತ್ತು ₹1,140 ಕೋಟಿ ಚರಾಸ್ತಿ ಹೊಂದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.</p><p>₹931 ಕೋಟಿ ಆಸ್ತಿ ಹೊಂದಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈವರೆಗೆ ದೇಶದ ಅತ್ಯಂತ ಶ್ರೀಮಂತ ಸಿಎಂ ಎನಿಸಿದ್ದರು. ಈಗ ಆ ಸ್ಥಾನಕ್ಕೆ ಡಿಕೆ ಲಗ್ಗೆ ಇಡುತ್ತಿದ್ದಾರೆ. </p><p>ಇನ್ನೂ ಇತ್ತೀಚೆಗೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿ ಅಭೂತಪೂರ್ವ ಗೆಲುವು ಸಾಧಿಸುವುದರೊಂದಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಟಿವಿಕೆ ಅಧ್ಯಕ್ಷ ಸಿ ಜೋಸೆಫ್ ವಿಜಯ್ ಅವರು ಮೂರನೇ ಸ್ಥಾನದಲ್ಲಿದ್ದು, ಅವರ ಒಟ್ಟು ಆಸ್ತಿ ಮೌಲ್ಯ ₹648 ಕೋಟಿಯಾಗಿದೆ.</p><p>ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ₹332 ಕೋಟಿ ಮೌಲ್ಯದ ಆಸ್ತಿ ಮೂಲಕ 4ನೇ ಸ್ಥಾನದಲ್ಲಿದ್ದಾರೆ. ನಾಗಾಲ್ಯಾಂಡ್ ಸಿಎಂ ನೈಫಿಯು ರಿಯೊ ₹46 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು ನಂತರದ ಸ್ಥಾನದಲ್ಲಿದ್ದಾರೆ.</p><p>ಉಳಿದಂತೆ, ₹42 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ 6ನೇ ಸ್ಥಾನ, ಪುದುಚೆರಿ ಸಿಎಂ ಎನ್. ರಂಗಸಾಮಿ (₹38 ಕೋಟಿ) 7ನೇ ಸ್ಥಾನ, ತೆಲಂಗಾಣ ಮುಖ್ಯಮಂತ್ರಿ ಅನುಮುಲ ರೇವಂತ್ ರೆಡ್ಡಿ (₹30 ಕೋಟಿ) 8ನೇ ಸ್ಥಾನ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (₹24 ಕೋಟಿ) 9ನೇ ಸ್ಥಾನ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ (₹23 ಕೋಟಿ) 10ನೇ ಸ್ಥನದಲ್ಲಿದ್ದಾರೆ.</p> .ಅನ್ನಭಾಗ್ಯ ಯೋಜನೆಗೆ ಸಿದ್ದರಾಮಯ್ಯರನ್ನು ಪ್ರೇರೇಪಿಸಿದ್ದ ಹುಟ್ಟೂರಿನ ಆ ಘಟನೆಗಳು...ಡಿಕೆಶಿ ಒಂದು ಬಾರಿಯ ಸಿಎಂ ಅಲ್ಲ, ದೀರ್ಘಾವಧಿ ಅಧಿಕಾರದಲ್ಲಿರುತ್ತಾರೆ: ಜ್ಯೋತಿಷಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>