<p><strong>ಬೆಂಗಳೂರು</strong>: ‘ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾನು ಮತ್ತು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ (ಮಾರ್ಚ್ 31) ಹೋಗುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಬಾಗಲಕೋಟೆಗೆ ಬುಧವಾರ ತೆರಳುತ್ತೇನೆ. ಆನಂತರ ಎರಡೂ ಕ್ಷೇತ್ರಗಳಿಗೆ ಮತ್ತೊಂದು ಸುತ್ತು ತೆರಳಿ ಪ್ರಚಾರ ಮಾಡುತ್ತೇನೆ. ಏಪ್ರಿಲ್ 5 ಮತ್ತು 6ರಂದು ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದೇನೆ. ಈಸ್ಟರ್ ಹಾಗೂ ಗುಡ್ ಫ್ರೈಡೆ ಕಾರಣ ಕೇರಳ ಪ್ರವಾಸವನ್ನು 5ಕ್ಕೆ ಮುಂದೂಡಿದ್ದೇನೆ’ ಎಂದು ಹೇಳಿದರು.</p>.<p>ನುಡಿದಂತೆ ನಡೆವ ಕಾಂಗ್ರೆಸ್: ‘ಅಸ್ಸಾಂನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ಬಗ್ಗೆ ಕೇಳಿದಾಗ, ‘ಅವರು ಘೋಷಣೆ ಪ್ರಟಿಸಿದ ಬಳಿಕ ನಾನು ಭಾಷಣಗಳನ್ನು ಮಾಡಿ ಬಂದಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಭೂಮಿ ಹಕ್ಕು ಘೋಷಣೆ ಮಾಡಿದ್ದೇವೆ. ₹ 25 ಲಕ್ಷದವರೆಗೂ ಆರೋಗ್ಯ ಕಾರ್ಯಕ್ರಮ ಘೋಷಿಸಿದ್ದೇವೆ’ ಎಂದರು.</p>.<p>‘ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಕೇವಲ ತನ್ನ ಕಾರ್ಯಕರ್ತರಿಗೆ ₹1200 ಮಾಸಿಕ ನೀಡುತ್ತಿದೆ. ನಾವು ಎಲ್ಲ ಫಲಾನುಭವಿಗಳಿಗೂ ಯೋಜನೆ ನೀಡಲಿದ್ದೇವೆ. ಅಸ್ಸಾಂ ಮಾತ್ರವಲ್ಲ ದೇಶದ ಯಾವುದೇ ರಾಜ್ಯದಲ್ಲೇ ಆಗಲಿ ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಿಜೆಪಿಯವರಂತೆ ಜನರ ಖಾತೆಗೆ ₹15 ಲಕ್ಷ ಹಾಕುತ್ತೇವೆ, ಅಚ್ಛೇ ದಿನ್ ತರುತ್ತೇವೆ ಎಂದು ಸುಳ್ಳು ಭರವಸೆ ನೀಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉಪ ಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾನು ಮತ್ತು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ (ಮಾರ್ಚ್ 31) ಹೋಗುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಬಾಗಲಕೋಟೆಗೆ ಬುಧವಾರ ತೆರಳುತ್ತೇನೆ. ಆನಂತರ ಎರಡೂ ಕ್ಷೇತ್ರಗಳಿಗೆ ಮತ್ತೊಂದು ಸುತ್ತು ತೆರಳಿ ಪ್ರಚಾರ ಮಾಡುತ್ತೇನೆ. ಏಪ್ರಿಲ್ 5 ಮತ್ತು 6ರಂದು ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದೇನೆ. ಈಸ್ಟರ್ ಹಾಗೂ ಗುಡ್ ಫ್ರೈಡೆ ಕಾರಣ ಕೇರಳ ಪ್ರವಾಸವನ್ನು 5ಕ್ಕೆ ಮುಂದೂಡಿದ್ದೇನೆ’ ಎಂದು ಹೇಳಿದರು.</p>.<p>ನುಡಿದಂತೆ ನಡೆವ ಕಾಂಗ್ರೆಸ್: ‘ಅಸ್ಸಾಂನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ಯೋಜನೆ ಘೋಷಣೆ ಮಾಡಿರುವ ಬಗ್ಗೆ ಕೇಳಿದಾಗ, ‘ಅವರು ಘೋಷಣೆ ಪ್ರಟಿಸಿದ ಬಳಿಕ ನಾನು ಭಾಷಣಗಳನ್ನು ಮಾಡಿ ಬಂದಿದ್ದೇನೆ. ನಾವು ನುಡಿದಂತೆ ನಡೆಯುತ್ತೇವೆ. ನಾವು ಭೂಮಿ ಹಕ್ಕು ಘೋಷಣೆ ಮಾಡಿದ್ದೇವೆ. ₹ 25 ಲಕ್ಷದವರೆಗೂ ಆರೋಗ್ಯ ಕಾರ್ಯಕ್ರಮ ಘೋಷಿಸಿದ್ದೇವೆ’ ಎಂದರು.</p>.<p>‘ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಕೇವಲ ತನ್ನ ಕಾರ್ಯಕರ್ತರಿಗೆ ₹1200 ಮಾಸಿಕ ನೀಡುತ್ತಿದೆ. ನಾವು ಎಲ್ಲ ಫಲಾನುಭವಿಗಳಿಗೂ ಯೋಜನೆ ನೀಡಲಿದ್ದೇವೆ. ಅಸ್ಸಾಂ ಮಾತ್ರವಲ್ಲ ದೇಶದ ಯಾವುದೇ ರಾಜ್ಯದಲ್ಲೇ ಆಗಲಿ ನಾವು ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಿಜೆಪಿಯವರಂತೆ ಜನರ ಖಾತೆಗೆ ₹15 ಲಕ್ಷ ಹಾಕುತ್ತೇವೆ, ಅಚ್ಛೇ ದಿನ್ ತರುತ್ತೇವೆ ಎಂದು ಸುಳ್ಳು ಭರವಸೆ ನೀಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>