ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್ ಭೇಟಿಯಾದ ಡಿ.ಕೆ. ಶಿವಕುಮಾರ್: ಗೋಪ್ಯ ಚರ್ಚೆ

ಕೇಶ್ವಾಪುರದ ಮಧುರಾ ಎಸ್ಟೇಟ್'ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
Published 31 ಮೇ 2023, 5:39 IST
Last Updated 31 ಮೇ 2023, 5:39 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್'ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು.

ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಗೋಪ್ಯ ಚರ್ಚೆ ನಡೆಸಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು.

'ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು' ಎಂದು ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ಒತ್ತಡ ಹೇರಿದ್ದಾರೆ. ಶೆಟ್ಟರ್ ಸಹ ಸೂಕ್ತ ಸ್ಥಾನಕ್ಕೆ ಕಾಯುತ್ತೇನೆ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ ಅವರ ಭೇಟಿ ಶೆಟ್ಟರ್ ಬೆಂಬಲಿಗರಲ್ಲಿ ಕುತೂಹಲ ಕೆರಳಿಸಿದೆ.

ಶೆಟ್ಟರ್ ನಿವಾಸದ ಎದುರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಜಮಾಯಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT