<p><strong>ಮೈಸೂರು:</strong> ‘ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಂ ಮಾಡೋಕೆ ಆಗಲ್ಲ’ ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು.</p><p>ತಮ್ಮ ಭಾಷಣದ ಆರಂಭದಲ್ಲಿ ವೇದಿಕೆಯಲ್ಲಿದ್ದವರ ಹೆಸರು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಹೆಸರನ್ನು ಬಿಟ್ಟಿದ್ದನ್ನು ವಕೀಲರೊಬ್ಬರು ನೆನಪಿಸಿದರು. ಆಗ ಸಿಟ್ಟಾದ ಅವರು, ‘ಇಲ್ಲಿ ಇಲ್ವಲ್ಲರಿ... ಹೊರಟು ಹೋಗಿದ್ದಾರೆ’ ಎಂದರು.</p><p>‘ಡಿ.ಕೆ. ಶಿವಕುಮಾರ್ ಹೊರಟು ಹೋದ್ರು ಬೆಂಗಳೂರಿಗೆ. ಯಾವಾಗಲೂ ಇರುವವರ ಹೆಸರು ಹೇಳಬೇಕೇ ಹೊರತು ಹೊರಟು ಹೋದವರ ಹೆಸರು ಹೇಳೋಕೆ ಆಗಲ್ಲ. ವೆಲ್ಕಮ್ ಮಾಡೋದು ಇರೋವರಿಗೆ. ಇಲ್ಲಿ ಯಾರೆಲ್ಲ ಇದ್ದಾರೆ ಅವರಿಗೆ ಮಾತ್ರ ವೆಲ್ಕಮ್ ಮಾಡೋದು. ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಮ್ ಮಾಡೋಕೆ ಆಗಲ್ಲ.. ಗೊತ್ತಾಯಿತಾ. ಈ ವಕೀಲರು ಸ್ವಲ್ಪ ಅರ್ಥ ಮಾಡಿಕೊಳ್ಳಬೇಕು ಇದೆಲ್ಲವನ್ನು’ ಎಂದು ಸಿದ್ದರಾಮಯ್ಯ ಹೇಳಿದರು.</p><p>‘ಅವರು ಪಾಪ (ವಕೀಲರು), ಡಿ.ಕೆ. ಶಿವಕುಮಾರ್ ಹೆಸರು ಹೇಳಿ ಎಂದು ಹೇಳುತ್ತಿದ್ದಾರೆ. ಅವರು ಬೆಂಗಳೂರಿಗೆ ಹೋಗ್ತೇನೆ ಎಂದು ಹೋದ್ರು. ಹೀಗಾಗಿ, ಅವರ ಹೆಸರು ನಾನು ಪ್ರಸ್ತಾಪ ಮಾಡಿಲ್ಲ’ ಎಂದೂ ಎದುರಿಗಿದ್ದವರನ್ನು ಉದ್ದೇಶಿಸಿ ಗಟ್ಟಿ ಧ್ವನಿಯಲ್ಲಿ ಮುಖ್ಯಮಂತ್ರಿ ಘೋಷಿಸಿದರು.</p>.<div><blockquote>ಇದು ಸಿದ್ದರಾಮಯ್ಯನ ಶಕ್ತಿ ಪ್ರದರ್ಶನ ಅಲ್ಲ. ಅಭಿವೃದ್ಧಿಯ ಶಕ್ತಿಯನ್ನು ನಿಮ್ಮ ಮುಂದಿಟ್ಟಿದ್ದೇವೆ. ಬಿಜೆಪಿಯವರೇ, ನೀವು ಮೈಸೂರಿಗೆ ಏನು ಸಾಕ್ಷಿಗುಡ್ಡೆ ಬಿಟ್ಟು ಹೋಗಿದ್ದೀರಿ ಹೇಳಿ</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಂ ಮಾಡೋಕೆ ಆಗಲ್ಲ’ ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು.</p><p>ತಮ್ಮ ಭಾಷಣದ ಆರಂಭದಲ್ಲಿ ವೇದಿಕೆಯಲ್ಲಿದ್ದವರ ಹೆಸರು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಹೆಸರನ್ನು ಬಿಟ್ಟಿದ್ದನ್ನು ವಕೀಲರೊಬ್ಬರು ನೆನಪಿಸಿದರು. ಆಗ ಸಿಟ್ಟಾದ ಅವರು, ‘ಇಲ್ಲಿ ಇಲ್ವಲ್ಲರಿ... ಹೊರಟು ಹೋಗಿದ್ದಾರೆ’ ಎಂದರು.</p><p>‘ಡಿ.ಕೆ. ಶಿವಕುಮಾರ್ ಹೊರಟು ಹೋದ್ರು ಬೆಂಗಳೂರಿಗೆ. ಯಾವಾಗಲೂ ಇರುವವರ ಹೆಸರು ಹೇಳಬೇಕೇ ಹೊರತು ಹೊರಟು ಹೋದವರ ಹೆಸರು ಹೇಳೋಕೆ ಆಗಲ್ಲ. ವೆಲ್ಕಮ್ ಮಾಡೋದು ಇರೋವರಿಗೆ. ಇಲ್ಲಿ ಯಾರೆಲ್ಲ ಇದ್ದಾರೆ ಅವರಿಗೆ ಮಾತ್ರ ವೆಲ್ಕಮ್ ಮಾಡೋದು. ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಮ್ ಮಾಡೋಕೆ ಆಗಲ್ಲ.. ಗೊತ್ತಾಯಿತಾ. ಈ ವಕೀಲರು ಸ್ವಲ್ಪ ಅರ್ಥ ಮಾಡಿಕೊಳ್ಳಬೇಕು ಇದೆಲ್ಲವನ್ನು’ ಎಂದು ಸಿದ್ದರಾಮಯ್ಯ ಹೇಳಿದರು.</p><p>‘ಅವರು ಪಾಪ (ವಕೀಲರು), ಡಿ.ಕೆ. ಶಿವಕುಮಾರ್ ಹೆಸರು ಹೇಳಿ ಎಂದು ಹೇಳುತ್ತಿದ್ದಾರೆ. ಅವರು ಬೆಂಗಳೂರಿಗೆ ಹೋಗ್ತೇನೆ ಎಂದು ಹೋದ್ರು. ಹೀಗಾಗಿ, ಅವರ ಹೆಸರು ನಾನು ಪ್ರಸ್ತಾಪ ಮಾಡಿಲ್ಲ’ ಎಂದೂ ಎದುರಿಗಿದ್ದವರನ್ನು ಉದ್ದೇಶಿಸಿ ಗಟ್ಟಿ ಧ್ವನಿಯಲ್ಲಿ ಮುಖ್ಯಮಂತ್ರಿ ಘೋಷಿಸಿದರು.</p>.<div><blockquote>ಇದು ಸಿದ್ದರಾಮಯ್ಯನ ಶಕ್ತಿ ಪ್ರದರ್ಶನ ಅಲ್ಲ. ಅಭಿವೃದ್ಧಿಯ ಶಕ್ತಿಯನ್ನು ನಿಮ್ಮ ಮುಂದಿಟ್ಟಿದ್ದೇವೆ. ಬಿಜೆಪಿಯವರೇ, ನೀವು ಮೈಸೂರಿಗೆ ಏನು ಸಾಕ್ಷಿಗುಡ್ಡೆ ಬಿಟ್ಟು ಹೋಗಿದ್ದೀರಿ ಹೇಳಿ</blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>