<p><strong>ಬೆಂಗಳೂರು:</strong> ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.</p><p>ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬುಧವಾರ ಸಂಜೆ 5.15ರ ಗೋಧೂಳಿ ಶುಭಲಗ್ನದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.</p><p>ಈ ಮೊದಲು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಮುಂದೆ ಇಲ್ಲವೇ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಬೇಕೆಂದು ತೀರ್ಮಾನಿಸಲಾಗಿತ್ತು. ಸಂಚಾರದಟ್ಟಣೆ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಸ್ಥಳವನ್ನು ನಿಗದಿಗೊಳಿಸಲಾಗಿದೆ.</p><p>ನೂತನ ಮುಖ್ಯಮಂತ್ರಿಗಳೊಂದಿಗೆ 12 ರಿಂದ 14 ಮಂದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಆದರೆ ಸಂಪುಟಕ್ಕೆ ಸೇರ್ಪಡೆಯಾಗುವವರು ಯಾರು ಎಂಬುದು ಈವರೆಗೂ ಖಚಿತವಾಗಿಲ್ಲ. ಪ್ರದೇಶವಾರು, ಜಾತಿ, ಸೇವಾ ಹಿರಿತನ, ಪಕ್ಷಕ್ಕೆ ಸಲ್ಲಿಸಿದ ಸೇವೆ ಹಾಗೂ ಮುಂಬರುವ 2028ರ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮತೋಲನದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.ಮಾಸ್ ಲೀಡರ್ ಸಿದ್ದರಾಮಯ್ಯ: ಮರಳಿನ ಮೇಲೆ ಅಕ್ಷರಾಭ್ಯಾಸದಿಂದ ಸಿಎಂ ಗಾದಿವರೆಗೆ....ಸಿದ್ದರಾಮಯ್ಯ ಸಂಪುಟದಲ್ಲಿದ್ದ 20 ಸಚಿವರಿಗೆ ಕೊಕ್; ಹೇಗಿರಲಿದೆ ಡಿಕೆಶಿ ಸಂಪುಟ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಿಳಿಸಿದ್ದಾರೆ.</p><p>ಲೋಕಭವನದ ಗಾಜಿನ ಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬುಧವಾರ ಸಂಜೆ 5.15ರ ಗೋಧೂಳಿ ಶುಭಲಗ್ನದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.</p><p>ಈ ಮೊದಲು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಮುಂದೆ ಇಲ್ಲವೇ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಬೇಕೆಂದು ತೀರ್ಮಾನಿಸಲಾಗಿತ್ತು. ಸಂಚಾರದಟ್ಟಣೆ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಸ್ಥಳವನ್ನು ನಿಗದಿಗೊಳಿಸಲಾಗಿದೆ.</p><p>ನೂತನ ಮುಖ್ಯಮಂತ್ರಿಗಳೊಂದಿಗೆ 12 ರಿಂದ 14 ಮಂದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಆದರೆ ಸಂಪುಟಕ್ಕೆ ಸೇರ್ಪಡೆಯಾಗುವವರು ಯಾರು ಎಂಬುದು ಈವರೆಗೂ ಖಚಿತವಾಗಿಲ್ಲ. ಪ್ರದೇಶವಾರು, ಜಾತಿ, ಸೇವಾ ಹಿರಿತನ, ಪಕ್ಷಕ್ಕೆ ಸಲ್ಲಿಸಿದ ಸೇವೆ ಹಾಗೂ ಮುಂಬರುವ 2028ರ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮತೋಲನದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.ಮಾಸ್ ಲೀಡರ್ ಸಿದ್ದರಾಮಯ್ಯ: ಮರಳಿನ ಮೇಲೆ ಅಕ್ಷರಾಭ್ಯಾಸದಿಂದ ಸಿಎಂ ಗಾದಿವರೆಗೆ....ಸಿದ್ದರಾಮಯ್ಯ ಸಂಪುಟದಲ್ಲಿದ್ದ 20 ಸಚಿವರಿಗೆ ಕೊಕ್; ಹೇಗಿರಲಿದೆ ಡಿಕೆಶಿ ಸಂಪುಟ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>