<p><strong>ಬೆಂಗಳೂರು:</strong> ‘ಕರ್ನಾಟಕದಲ್ಲಿ ಖಾಲಿ ಹುದ್ದೆಗಳನ್ನು ಹಗರಣ ರಹಿತವಾಗಿ ತುಂಬಲು ಕಾಂಗ್ರೆಸ್ ಸರ್ಕಾರವು ಕ್ರಮ ವಹಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಕರ ಸಮಸ್ಯೆಗಳನ್ನು ನಮ್ಮ ಸರ್ಕಾರ ಬಗೆಹರಿಸಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸಂದೇಶ ನೀಡುತ್ತೇವೆ’ ಎಂದು ತಿಳಿಸಿದರು.</p>. <p>‘ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹುದ್ದೆ ಭರ್ತಿ ಮಾಡಲು ಆಗಲಿಲ್ಲ. ಅವರ ಸಮಯದಲ್ಲಿ ಹಗರಣಗಳು ಆದವು. ನಾವು ಯುವಕರ ನೋವು ಅರ್ಥ ಮಾಡಿಕೊಂಡಿದ್ದೇವೆ. ಒಳಮೀಸಲು ವಿಚಾರದಿಂದ ಅಡಚಣೆಯಾಗಿದೆ’ ಎಂದು ಹೇಳಿದರು.</p>. <p>‘ನಮ್ಮ ಮೆಟ್ರೊ ಜಾಲ ವಿಸ್ತರಣೆ ಸಂಬಂಧ ಸಮೀಕ್ಷೆ ಕಾರ್ಯ ನಡೆದಿದೆ. ಡಬಲ್ ಡೆಕರ್ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ಕೇಳಿರುವುದರಿಂದ ಅದಕ್ಕೆ ಉತ್ತರ ನೀಡಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.</p>. <p>‘ಹಣ ಲಭ್ಯತೆ ಇಲ್ಲದೇ ಇರುವ ಕಾರಣಕ್ಕೆ ಕಾಮಗಾರಿಗಳನ್ನು ತೆಗೆದುಕೊಳ್ಳಬೇಡಿ ಎಂದು ಅನೇಕ ಗುತ್ತಿಗೆದಾರರಿಗೆ ಸಲಹೆ ನೀಡಿದ್ದರೂ, ಒಂದಷ್ಟು ಜನ ಕಾಮಗಾರಿಗಳನ್ನು ತೆಗೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿಭಟನೆ ನಡೆಸುವುದಾಗಿ ಹೇಳಿರುವ ಬಗ್ಗೆ ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕದಲ್ಲಿ ಖಾಲಿ ಹುದ್ದೆಗಳನ್ನು ಹಗರಣ ರಹಿತವಾಗಿ ತುಂಬಲು ಕಾಂಗ್ರೆಸ್ ಸರ್ಕಾರವು ಕ್ರಮ ವಹಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>. <p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯುವಕರ ಸಮಸ್ಯೆಗಳನ್ನು ನಮ್ಮ ಸರ್ಕಾರ ಬಗೆಹರಿಸಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಸಂದೇಶ ನೀಡುತ್ತೇವೆ’ ಎಂದು ತಿಳಿಸಿದರು.</p>. <p>‘ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹುದ್ದೆ ಭರ್ತಿ ಮಾಡಲು ಆಗಲಿಲ್ಲ. ಅವರ ಸಮಯದಲ್ಲಿ ಹಗರಣಗಳು ಆದವು. ನಾವು ಯುವಕರ ನೋವು ಅರ್ಥ ಮಾಡಿಕೊಂಡಿದ್ದೇವೆ. ಒಳಮೀಸಲು ವಿಚಾರದಿಂದ ಅಡಚಣೆಯಾಗಿದೆ’ ಎಂದು ಹೇಳಿದರು.</p>. <p>‘ನಮ್ಮ ಮೆಟ್ರೊ ಜಾಲ ವಿಸ್ತರಣೆ ಸಂಬಂಧ ಸಮೀಕ್ಷೆ ಕಾರ್ಯ ನಡೆದಿದೆ. ಡಬಲ್ ಡೆಕರ್ ವಿಚಾರವಾಗಿ ಕೇಂದ್ರ ಸರ್ಕಾರ ಸ್ಪಷ್ಟನೆ ಕೇಳಿರುವುದರಿಂದ ಅದಕ್ಕೆ ಉತ್ತರ ನೀಡಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.</p>. <p>‘ಹಣ ಲಭ್ಯತೆ ಇಲ್ಲದೇ ಇರುವ ಕಾರಣಕ್ಕೆ ಕಾಮಗಾರಿಗಳನ್ನು ತೆಗೆದುಕೊಳ್ಳಬೇಡಿ ಎಂದು ಅನೇಕ ಗುತ್ತಿಗೆದಾರರಿಗೆ ಸಲಹೆ ನೀಡಿದ್ದರೂ, ಒಂದಷ್ಟು ಜನ ಕಾಮಗಾರಿಗಳನ್ನು ತೆಗೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿಭಟನೆ ನಡೆಸುವುದಾಗಿ ಹೇಳಿರುವ ಬಗ್ಗೆ ಅವರೊಂದಿಗೆ ಚರ್ಚಿಸುತ್ತೇನೆ’ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>