<p>‘ಹೆಸರು ಸಂಪಾದನೆಗೆ ನಾನು, ನನ್ನ ಪಕ್ಷದವರು ಆಲೋಚಿಸುತ್ತೇವೆ. ಲಾಭದ ಬಗ್ಗೆ ಯೋಜನೆ ಮಾಡುವವನು ನೀನು’ ಎಂದು ಬಿಜೆಪಿಯ ಸಿ.ಟಿ. ರವಿ ಅವರಿಗೆ ಕುಟುಕಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ರಾಜ್ಯ ಹಾಗೂ ನಗರದಲ್ಲಿ ನನ್ನದೇ ಆದ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕು ಎಂದು ತೀರ್ಮಾನಿಸಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ನ ಪ್ರಶ್ನೋತ್ತರ ಸಮಯದಲ್ಲಿ ಬೆಂಗಳೂರಿನ ಸುರಂಗ ರಸ್ತೆ ಯೋಜನೆ ಪ್ರಸ್ತಾಪವಾಗುತ್ತಿದ್ದ ಸಂದರ್ಭದಲ್ಲಿ, ‘ಯೋಜನೆ ಪಾರದರ್ಶಕವಾಗಿರಲಿ. ಏಕೆಂದರೆ ಲಾಭ ಇಲ್ಲದೆ ಡಿ.ಕೆ. ಶಿವಕುಮಾರ್ ಅವರು ಏನು ಮಾಡುವುದಿಲ್ಲ ಎಂಬ ಭಾವನೆ ಎಲ್ಲರಲ್ಲಿದೆ’ ಎಂದರು ಸಿ.ಟಿ. ರವಿ.</p>.<p>‘ಕೆಲವು ಸಂಸದರು ನನ್ನ ಮೇಲೆ ಆರೋಪ ಮಾಡಿ, ನಾನು ದುಡ್ಡು ಹೊಡೆಯಲು ಈ ಯೋಜನೆ ಮಾಡುತ್ತಿದ್ದೇನೆ ಎಂದು ಟೀಕೆ ಮಾಡಿದ್ದಾರೆ. ನಾನು ಇಲ್ಲಿ ವ್ಯವಹಾರ ನೋಡುತ್ತಿಲ್ಲ. ನಾನು ಬೆಂಗಳೂರಿನ ಮೇಲೆ ಬಹಳ ಆಸಕ್ತಿ ಹೊಂದಿದ್ದೇನೆ. ಯೋಜನೆಯಲ್ಲಿ ಯಾವುದೇ ಲೋಪ, ಭ್ರಷ್ಟಾಚಾರ ಇದ್ದರೆ, ಯಾವುದೇ ತನಿಖೆಗೂ ಸಿದ್ಧ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಹೆಸರು ಸಂಪಾದನೆಗೆ ನಾನು, ನನ್ನ ಪಕ್ಷದವರು ಆಲೋಚಿಸುತ್ತೇವೆ. ಲಾಭದ ಬಗ್ಗೆ ಯೋಜನೆ ಮಾಡುವವನು ನೀನು’ ಎಂದು ಬಿಜೆಪಿಯ ಸಿ.ಟಿ. ರವಿ ಅವರಿಗೆ ಕುಟುಕಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ರಾಜ್ಯ ಹಾಗೂ ನಗರದಲ್ಲಿ ನನ್ನದೇ ಆದ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕು ಎಂದು ತೀರ್ಮಾನಿಸಿದ್ದೇನೆ’ ಎಂದರು.</p>.<p>ವಿಧಾನ ಪರಿಷತ್ನ ಪ್ರಶ್ನೋತ್ತರ ಸಮಯದಲ್ಲಿ ಬೆಂಗಳೂರಿನ ಸುರಂಗ ರಸ್ತೆ ಯೋಜನೆ ಪ್ರಸ್ತಾಪವಾಗುತ್ತಿದ್ದ ಸಂದರ್ಭದಲ್ಲಿ, ‘ಯೋಜನೆ ಪಾರದರ್ಶಕವಾಗಿರಲಿ. ಏಕೆಂದರೆ ಲಾಭ ಇಲ್ಲದೆ ಡಿ.ಕೆ. ಶಿವಕುಮಾರ್ ಅವರು ಏನು ಮಾಡುವುದಿಲ್ಲ ಎಂಬ ಭಾವನೆ ಎಲ್ಲರಲ್ಲಿದೆ’ ಎಂದರು ಸಿ.ಟಿ. ರವಿ.</p>.<p>‘ಕೆಲವು ಸಂಸದರು ನನ್ನ ಮೇಲೆ ಆರೋಪ ಮಾಡಿ, ನಾನು ದುಡ್ಡು ಹೊಡೆಯಲು ಈ ಯೋಜನೆ ಮಾಡುತ್ತಿದ್ದೇನೆ ಎಂದು ಟೀಕೆ ಮಾಡಿದ್ದಾರೆ. ನಾನು ಇಲ್ಲಿ ವ್ಯವಹಾರ ನೋಡುತ್ತಿಲ್ಲ. ನಾನು ಬೆಂಗಳೂರಿನ ಮೇಲೆ ಬಹಳ ಆಸಕ್ತಿ ಹೊಂದಿದ್ದೇನೆ. ಯೋಜನೆಯಲ್ಲಿ ಯಾವುದೇ ಲೋಪ, ಭ್ರಷ್ಟಾಚಾರ ಇದ್ದರೆ, ಯಾವುದೇ ತನಿಖೆಗೂ ಸಿದ್ಧ’ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>