<p><strong>ಬೆಂಗಳೂರು</strong>: ‘ವಿಧಾನ ಪರಷತ್ತಿನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಹಳ ಘನತೆ ಇದೆ. ಆ ಸ್ಥಾನದಲ್ಲಿ ಇರುವ ಛಲವಾದಿ ನಾರಾಯಣಸ್ವಾಮಿ ಅವರು ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿತುಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಉಪಹಾರ ಕೂಟಕ್ಕೆ ಹೋಗಿದ್ದಾಗ ಇಬ್ಬರು ನಾಯಕರೂ ಕಟ್ಟಿಕೊಂಡಿದ್ದ ಕೈಗಡಿಯಾರಗಳ ಬಗ್ಗೆ ಹೇಳಿಕೆ ನೀಡಿದ್ದ ನಾರಾಯಣಸ್ವಾಮಿ, ‘ಈ ಕೈಗಡಿಯಾರಗಳ ಬಗ್ಗೆ ಶಿವಕುಮಾರ್ ಅವರು ಮಾಹಿತಿ ನೀಡಿರಲಿಲ್ಲ’ ಎಂದಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಕುಮಾರ್ ಅವರು, ‘ಕೈಗಡಿಯಾರದ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸಿದ್ದೇನೋ ಇಲ್ಲವೋ ಎಂಬುದನ್ನು ನಾರಾಯಣಸ್ವಾಮಿ ಅವರು ಪರಿಶೀಲಿಸಿಕೊಳ್ಳಬಹುದು. ಲೋಕಾಯುಕ್ತ ಸಂಸ್ಥೆಗೆ ಮನವಿ ಸಲ್ಲಿಸಿದರೆ, ನನ್ನೆಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದರು.</p>.<p>‘ನವಿಲನ್ನು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ’ ಆಡಬೇಡಿ. ನಿಮಗೆ ಇರುವ ಸಾಂವಿಧಾನಿಕ ಹುದ್ದೆ, ಅಧಿಕಾರ ಮತ್ತು ಜವಾಬ್ದಾರಿಯನ್ನು ಅರಿತುಕೊಂಡು ವಿವೇಕದಿಂದ ವರ್ತಿಸಿ. ಏನನ್ನೂ ತಿಳಿದುಕೊಳ್ಳದೆ ಮಾತನಾಡುವುದು ನಿಮಗೆ ಘನತೆ ತರುವುದಿಲ್ಲ’ ಎಂದು ಹೇಳಿದರು.</p>.<p>ನಂತರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಲೋಕಾಯುಕ್ತಕ್ಕೆ ನಾನು ಸಲ್ಲಿಸಿರುವ ಪ್ರಮಾಣಪತ್ರವನ್ನು ಇಲ್ಲಿಯೇ ಹಾಕುತ್ತಿದ್ದೇನೆ. ಒಮ್ಮೆ ನೋಡಿಕೊಳ್ಳಿ. ಬೇಕಿದ್ದರೆ ಲೋಕಾಯುಕ್ತಕ್ಕೆ ಹೋಗಿ ಪರಿಶೀಲಿಸಿಕೊಳ್ಳಿ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಲೋಕಾಯುಕ್ತಕ್ಕೆ ತಾವು ಸಲ್ಲಿಸಿದ್ದ ಪ್ರಮಾಣಪತ್ರಗಳ ಚಿತ್ರಗಳನ್ನು ಪೋಸ್ಟ್ನಲ್ಲಿ ಲಗತ್ತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಧಾನ ಪರಷತ್ತಿನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಬಹಳ ಘನತೆ ಇದೆ. ಆ ಸ್ಥಾನದಲ್ಲಿ ಇರುವ ಛಲವಾದಿ ನಾರಾಯಣಸ್ವಾಮಿ ಅವರು ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಕಲಿತುಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಉಪಹಾರ ಕೂಟಕ್ಕೆ ಹೋಗಿದ್ದಾಗ ಇಬ್ಬರು ನಾಯಕರೂ ಕಟ್ಟಿಕೊಂಡಿದ್ದ ಕೈಗಡಿಯಾರಗಳ ಬಗ್ಗೆ ಹೇಳಿಕೆ ನೀಡಿದ್ದ ನಾರಾಯಣಸ್ವಾಮಿ, ‘ಈ ಕೈಗಡಿಯಾರಗಳ ಬಗ್ಗೆ ಶಿವಕುಮಾರ್ ಅವರು ಮಾಹಿತಿ ನೀಡಿರಲಿಲ್ಲ’ ಎಂದಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಕುಮಾರ್ ಅವರು, ‘ಕೈಗಡಿಯಾರದ ಬಗ್ಗೆ ನಾನು ಮಾತನಾಡುವುದಿಲ್ಲ. ನಾನು ಲೋಕಾಯುಕ್ತಕ್ಕೆ ಮಾಹಿತಿ ಸಲ್ಲಿಸಿದ್ದೇನೋ ಇಲ್ಲವೋ ಎಂಬುದನ್ನು ನಾರಾಯಣಸ್ವಾಮಿ ಅವರು ಪರಿಶೀಲಿಸಿಕೊಳ್ಳಬಹುದು. ಲೋಕಾಯುಕ್ತ ಸಂಸ್ಥೆಗೆ ಮನವಿ ಸಲ್ಲಿಸಿದರೆ, ನನ್ನೆಲ್ಲಾ ದಾಖಲೆಗಳನ್ನು ನೀಡುತ್ತೇನೆ’ ಎಂದರು.</p>.<p>‘ನವಿಲನ್ನು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ’ ಆಡಬೇಡಿ. ನಿಮಗೆ ಇರುವ ಸಾಂವಿಧಾನಿಕ ಹುದ್ದೆ, ಅಧಿಕಾರ ಮತ್ತು ಜವಾಬ್ದಾರಿಯನ್ನು ಅರಿತುಕೊಂಡು ವಿವೇಕದಿಂದ ವರ್ತಿಸಿ. ಏನನ್ನೂ ತಿಳಿದುಕೊಳ್ಳದೆ ಮಾತನಾಡುವುದು ನಿಮಗೆ ಘನತೆ ತರುವುದಿಲ್ಲ’ ಎಂದು ಹೇಳಿದರು.</p>.<p>ನಂತರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಲೋಕಾಯುಕ್ತಕ್ಕೆ ನಾನು ಸಲ್ಲಿಸಿರುವ ಪ್ರಮಾಣಪತ್ರವನ್ನು ಇಲ್ಲಿಯೇ ಹಾಕುತ್ತಿದ್ದೇನೆ. ಒಮ್ಮೆ ನೋಡಿಕೊಳ್ಳಿ. ಬೇಕಿದ್ದರೆ ಲೋಕಾಯುಕ್ತಕ್ಕೆ ಹೋಗಿ ಪರಿಶೀಲಿಸಿಕೊಳ್ಳಿ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಲೋಕಾಯುಕ್ತಕ್ಕೆ ತಾವು ಸಲ್ಲಿಸಿದ್ದ ಪ್ರಮಾಣಪತ್ರಗಳ ಚಿತ್ರಗಳನ್ನು ಪೋಸ್ಟ್ನಲ್ಲಿ ಲಗತ್ತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>