<p><strong>ಬೆಂಗಳೂರು</strong>: ‘ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ ಎಚ್.ಎಂ .ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>'ಬಳ್ಳಾರಿ ಗಲಭೆ ಕುರಿತು ಅಧ್ಯಯನ ನಡೆಸಲು ಕೆಪಿಸಿಸಿ ರಚಿಸಿರುವ ಎಚ್.ಎಂ.ರೇವಣ್ಣ ನೇತೃತ್ವದ ಸಮಿತಿ ವರದಿ ನೀಡಿದೆಯೇ’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ರೇವಣ್ಣ ನನ್ನನ್ನು ಭೇಟಿ ಮಾಡಿ ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ತಿಳಿಸಿದ್ದಾರೆ’ ಎಂದರು.</p>.<p>‘ಎಲ್ಲ ಕಡೆಗಳಲ್ಲೂ ಪ್ರತಿಮೆಗಳನ್ನು ಸ್ಥಾಪಿಸುತ್ತಾರೆ. ಅದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿ ಒಂದು ಸಮುದಾಯಕ್ಕೆ ಸೇರಿದವರೇ? ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ದನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ’ ಎಂದರು.</p>.<p>ಜನಾರ್ದನ ರೆಡ್ಡಿ ಝೆಡ್ ಪ್ಲಸ್ ಭದ್ರತೆ ಕೇಳಿರುವ ಕುರಿತು ಕೇಳಿದ್ದಕ್ಕೆ ‘ಝಡ್ ಭದ್ರತೆಯಾದರೂ ಕೇಳಲಿ. ಇರಾನ್, ಅಮೆರಿಕದಿಂದಾದರೂ ಭದ್ರತೆ ತೆಗೆದುಕೊಂಡು ಬರಲಿ. ಬೇಡ ಅಂದವರು ಯಾರು’ ಎಂದು ಪ್ರಶ್ನಿಸಿದರು.</p>.<p>‘ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಗನ್ ಮ್ಯಾನ್ ಹಾರಿಸಿದ ಗುಂಡು ತಗಲಿ ಸಾವು ಸಂಭವಿಸಿತ್ತು’ ಎನ್ನುವ ವರದಿ ಬಗ್ಗೆ ಕೇಳಿದಾಗ, ‘ಯಾರದ್ದೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವರದಿ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ ಎಚ್.ಎಂ .ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>'ಬಳ್ಳಾರಿ ಗಲಭೆ ಕುರಿತು ಅಧ್ಯಯನ ನಡೆಸಲು ಕೆಪಿಸಿಸಿ ರಚಿಸಿರುವ ಎಚ್.ಎಂ.ರೇವಣ್ಣ ನೇತೃತ್ವದ ಸಮಿತಿ ವರದಿ ನೀಡಿದೆಯೇ’ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ರೇವಣ್ಣ ನನ್ನನ್ನು ಭೇಟಿ ಮಾಡಿ ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ತಿಳಿಸಿದ್ದಾರೆ’ ಎಂದರು.</p>.<p>‘ಎಲ್ಲ ಕಡೆಗಳಲ್ಲೂ ಪ್ರತಿಮೆಗಳನ್ನು ಸ್ಥಾಪಿಸುತ್ತಾರೆ. ಅದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿ ಒಂದು ಸಮುದಾಯಕ್ಕೆ ಸೇರಿದವರೇ? ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ದನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ’ ಎಂದರು.</p>.<p>ಜನಾರ್ದನ ರೆಡ್ಡಿ ಝೆಡ್ ಪ್ಲಸ್ ಭದ್ರತೆ ಕೇಳಿರುವ ಕುರಿತು ಕೇಳಿದ್ದಕ್ಕೆ ‘ಝಡ್ ಭದ್ರತೆಯಾದರೂ ಕೇಳಲಿ. ಇರಾನ್, ಅಮೆರಿಕದಿಂದಾದರೂ ಭದ್ರತೆ ತೆಗೆದುಕೊಂಡು ಬರಲಿ. ಬೇಡ ಅಂದವರು ಯಾರು’ ಎಂದು ಪ್ರಶ್ನಿಸಿದರು.</p>.<p>‘ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಗನ್ ಮ್ಯಾನ್ ಹಾರಿಸಿದ ಗುಂಡು ತಗಲಿ ಸಾವು ಸಂಭವಿಸಿತ್ತು’ ಎನ್ನುವ ವರದಿ ಬಗ್ಗೆ ಕೇಳಿದಾಗ, ‘ಯಾರದ್ದೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವರದಿ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>