<p><strong>ಬೆಂಗಳೂರು</strong> : ಬೆಂಗಳೂರು: ‘ನಾಯಕತ್ವ ವಿಚಾರ ದಲ್ಲಿ ನಾನು, ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ ಏನು ಎಂಬುದನ್ನು ಸಮಯ ಬಂದಾಗ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಈ ತೀರ್ಮಾನ ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟಿನ ವ್ಯವಹಾರವಲ್ಲ’ ಎಂದೂ ಹೇಳಿದರು.</p><p>ಆ ಮೂಲಕ, ‘ಅಧಿಕಾರ ಹಂಚಿಕೆ’ ವಿಚಾರದಲ್ಲಿ ತಮ್ಮ ಮತ್ತು ಸಿದ್ದರಾಮಯ್ಯ ಮಧ್ಯೆ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಒಪ್ಪಂದ ಆಗಿರುವುದು ನಿಜ ಎಂದು ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ‘ಆ ಒಪ್ಪಂದ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಆ ಸಂದೇಶ ನೀಡುತ್ತಾರೆ’ ಎಂದೂ ಹೇಳುವ ಮೂಲಕ ಅವರು ಕುತೂಹಲ ಮೂಡಿಸಿದ್ದಾರೆ.</p><p>ಬೆಳಗಾವಿಯಲ್ಲಿ ಡಿಸೆಂಬರ್ನಲ್ಲಿ ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಶಾಸಕರು ಮತ್ತು ಸಿದ್ದರಾಮಯ್ಯ ನಡುವೆ ಬಿಸಿಬಿಸಿ ಚರ್ಚೆಯ ಮಧ್ಯೆ ‘ನಾಯಕತ್ವ ಬದಲಾವಣೆ’ ವಿಷಯ ಪ್ರಸ್ತಾಪವಾದಾಗ, ‘ಮುಖ್ಯಮಂತ್ರಿ ಸ್ಥಾನಕ್ಕೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ. ನಾನು ಐದು ವರ್ಷಕ್ಕೆ ಆಯ್ಕೆಯಾಗಿದ್ದೇನೆ. ಹೈಕಮಾಂಡ್ ನನ್ನ ಪರ’ ಎಂದು ಸಿದ್ದರಾಮಯ್ಯ ಸ್ಪಷ್ಟ ಧ್ವನಿಯಲ್ಲಿ ಹೇಳಿದ್ದರು.</p><p>ಅದೇ ದಿನ ಅಂಕೋಲಾದಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ‘ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್ ಅನ್ನು ಒಪ್ಪಿಸಿದ್ದೇವೆ’ ಎಂದು ವಾದ ಮುಂದಿಟ್ಟಿದ್ದರು.</p><p>ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ‘ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗ.<br>ಅವರ ಬಗ್ಗೆ ನಾನು ಏನನ್ನೂ ಮಾತ ನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ’ ಎಂದರು.</p><p>‘ನಾಯಕರ ಹೇಳಿಗೆ ಬಗ್ಗೆ ಮಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರು ಕ್ರಮ ತೆಗೆದು ಕೈಗೊಳ್ಳುತ್ತಾರೆ. ಮಹದೇವಪ್ಪನಿಗೆ ಹಾಗೂ ಬೇರೆಯವರಿಗೆ ನಾನು ಉತ್ತರ ನೀಡುವುದಿಲ್ಲ’ ಎಂದು ಹೇಳಿದರು.</p>.<p><strong>ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು: (ದಾವಣಗೆರೆ ವರದಿ): ‘</strong>ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಲವಾದ ವಿಶ್ವಾಸವಿದೆ. ಮುಖ್ಯಮಂತ್ರಿ ಹುದ್ದೆಯ ಕುರಿತು ಎದ್ದಿರುವ ಗೊಂದಲಗಳಿಗೆ ಹೈಕಮಾಂಡ್ ಕೂಡಲೇ ತೆರೆ ಎಳೆಯಬೇಕು’ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.</p><p>‘ಸಚಿವ ಎಚ್.ಸಿ. ಮಹದೇವಪ್ಪ ಅವರು ಶಾಸಕರನ್ನು ನಾಯಿಗೆ ಹೋಲಿಸಿ<br>ಮಾತನಾಡಬಾರದಿತ್ತು. ಅವರಿಂದ ಇಂತಹ ಮಾತು ನಿರೀಕ್ಷಿಸಿರಲಿಲ್ಲ. ಶಾಸಕರನ್ನು ನಾಯಿಗೆ ಹೋಲಿಕೆ ಮಾಡಿದರೆ ಅವರು ಯಾರು?’ ಎಂದು ಪ್ರಶ್ನಿಸಿದರು.</p><p>‘ಮಹದೇವಪ್ಪ ಅವರು ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದನ್ನು ಇನ್ನಾದರೂ ನಿಲ್ಲಿಸಬೇಕು. ಬಾಲ, ನಾಯಿ ಎರಡೂ ನಮ್ಮವೇ. ಬಾಲದ ಬಗ್ಗೆ ಬೇಸರ ಮಾಡಿಕೊಂಡರೆ ನಾಯಿಗೆ ಗೌರವ ಸಿಗುವುದಿಲ್ಲ. ಅವರ ಹೇಳಿಕೆಯನ್ನು ಹೈಕಮಾಂಡ್ ಗಮನಿಸಲಿದೆ’ ಎಂದರು. ‘ಶಾಸಕರು ಪ್ರವಾಸಕ್ಕೆ ತೆರಳುವುದು ವೈಯಕ್ತಿಕ. ಬಜೆಟ್ ಪೂರ್ವದಲ್ಲಿ ಪ್ರವಾಸ ತೆರಳುತ್ತಿರುವುದಕ್ಕೆ ಆಕ್ಷೇಪವಿದೆ’ ಎಂದರು.</p> .<div><blockquote>ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ರಾಜ್ಯದಲ್ಲಿ ಈ ಬಗ್ಗೆ ಚರ್ಚಿಸುವುದು ಅಕ್ಷಮ್ಯ ಅಪರಾಧ</blockquote><span class="attribution">ಲಕ್ಷ್ಮಿ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ</span></div>.<div><blockquote>ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆಂದರೆ ಯಥಾಸ್ಥಿತಿ ಎಂದೇ ಅರ್ಥ. ಮಹತ್ವದ ರಾಜಕೀಯ ಬದಲಾವಣೆಯಾಗುತ್ತದೆ ಎಂದು ಅಂದುಕೊಂಡರೆ ಸುಳ್ಳು </blockquote><span class="attribution"> ಕೆ.ಎನ್. ರಾಜಣ್ಣ ಶಾಸಕ</span></div>.<p><strong>ನನಗೆ ಶಾಸಕರ ವಿದೇಶ ಪ್ರವಾಸ ಗೊತ್ತಿಲ್ಲ</strong></p><p>ಶಾಸಕರ ವಿದೇಶ ಪ್ರವಾಸದ ಬಗ್ಗೆ ಕೇಳಿದಾಗ, “ನನಗೆ ಯಾವ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಮಾಧ್ಯಮಗಳಿಂದಷ್ಟೇ ತಿಳಿದಿದೆ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಇದು ಪ್ರವಾಸ ಕಳುಹಿಸುತ್ತಿರುವವರು ಉಂಟು ಹಾಗೂ ಪ್ರವಾಸ ಹೋಗುತ್ತಿರುವವರು ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.</p>.<p><strong>ಬಿಜೆಪಿ ಸರ್ಕಾರ ಚಾಣಾಕ್ಯ ವಿವಿ, ಆರ್ ಎಸ್ಎಸ್ ಕಚೇರಿಗೆ ನೂರಾರು ಎಕರೆ ಕೊಟ್ಟಿಲ್ಲವೇ?</strong></p><p>ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಸಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ಖಂಡಿತವಾಗಿ ನಾವು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ನಾವು ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯ ಶತಮಾನೋತ್ಸವ ಹಿನ್ನೆಲೆಯಲ್ಲಿ 100 ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಾವು 5-10 ಸಾವಿರ ಚದರ ಅಡಿಗಳಷ್ಟು ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗ ಪಡೆದಿದ್ದಾರೆ. ಚಾಣಾಕ್ಯ ವಿವಿಗೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ರೂಪಾಯಿ ಬೆಳೆಬಾಳುತ್ತದೆ. ಆದರೆ ಬಿಜೆಪಿಯವರು ಪ್ರತಿ ಎಕರೆಗೆ 50 ಲಕ್ಷದ ದರದಲ್ಲಿ 100 ಎಕರೆ ಜಾಗ ಮಂಜೂರು ಮಾಡಿದ್ದು, ಸಿಎಸ್ಆರ್ ನಿಧಿ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದಾರೆ. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಬಿಜೆಪಿ ಜಾಗ ಮಂಜೂರು ಮಾಡದೇ, ಆರ್ ಎಸ್ಎಸ ಕಚೇರಿ ಹೇಗೆ ನಿರ್ಮಾಣವಾಯಿತು? ಸದಾಶಿವನಗರದಲ್ಲಿ ನಮ್ಮ ಮನೆಯ ಪಕ್ಕದಲ್ಲಿರುವ ಪಾರ್ಕ್ ಅನ್ನು ವೆಲ್ ನೆಸ್ ಸೆಂಟರ್ ನ ಯೋಗಾ ಕಚೇರಿಗೆ ನೀಡಿದ್ದು, ಕಚೇರಿ ಕಟ್ಟಿಕೊಂಡಿದ್ದಾರೆ. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ. ಅವರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ಅವರು ಏನಾದರೂ ಆರೋಪ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ ದೇವಾಲಯವನ್ನು ಕಟ್ಟಲು ಈ ತೀರ್ಮಾನಕ್ಕೆ ಬಂದಿದ್ದೇವೆ. ಇದು ನಮ್ಮ ಕರ್ತವ್ಯ. ನಾನು ಇದನ್ನು ಮಾಡಿಯೇ ಮಾಡುತ್ತೇನೆ. ಎಲ್ಲಾ ಮಾನದಂಡಗಳು, ಅರ್ಹತೆ ಆಧಾರದ ಮೇಲೆ ನಾವು ಈ ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರುವುದಾದರೆ ಹತ್ತಲಿ” ಎಂದರು.</p>.<p><strong>ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಡಿ.ಕೆ. ಸುರೇಶ್</strong></p><p>‘ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ತಿರುಗೇಟು ನೀಡಿದರು.</p><p>ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ್ದ ಮಹದೇವಪ್ಪ, ‘ಬಾಲ ನಾಯಿಯನ್ನೇ ಅಲ್ಲಾಡಿಸಬಾರದು’ ಎಂದು ಸೋಮವಾರ ಹೇಳಿಕೆ ನೀಡಿದ್ದರು.</p><p>ಈ ಬಗ್ಗೆ ಸುದ್ದಿಗಾರರು ಮಂಗಳವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ‘ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ, ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು’ ಎಂದರು.</p><p>‘ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ’ ಎಂದು ಕೇಳಿದಾಗ, ‘ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ’ ಎಂದರು.</p>.<p><strong>ಇನ್ನೇನೂ ಹೇಳಲಾರೆ: ಯತೀಂದ್ರ</strong></p><p>ಮೈಸೂರು: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಇನ್ನೇನೂ ಹೇಳಲಾರೆ. ಬೇರೆಯವರ ಹೇಳಿಕೆಗಳಿಗೆ ಉತ್ತರಿಸುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.</p><p>‘ಯತೀಂದ್ರ ವರ್ಗಾವಣೆ ಸಚಿವ’ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಸಿಟ್ಟಾದ ಅವರು, ‘ಹಾದಿ ಬೀದಿಯಲ್ಲಿ ಹೋಗುವವರೆಲ್ಲ ಆಧಾರವಿಲ್ಲದೆ ಮಾತನಾಡಿದರೆ ಉತ್ತರಿಸಲಾಗದು. ಮಾಜಿ ಸಂಸದ ಪ್ರತಾಪ ಸಿಂಹ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿಯಲ್ಲಿ ಕೆಲಸವಿಲ್ಲ. ಏನೇನೊ ಹೇಳುತ್ತಿರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong> : ಬೆಂಗಳೂರು: ‘ನಾಯಕತ್ವ ವಿಚಾರ ದಲ್ಲಿ ನಾನು, ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ ಏನು ಎಂಬುದನ್ನು ಸಮಯ ಬಂದಾಗ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಈ ತೀರ್ಮಾನ ಕದ್ದುಮುಚ್ಚಿ ಮಾಡಿಕೊಂಡಿರುವ ಗುಟ್ಟಿನ ವ್ಯವಹಾರವಲ್ಲ’ ಎಂದೂ ಹೇಳಿದರು.</p><p>ಆ ಮೂಲಕ, ‘ಅಧಿಕಾರ ಹಂಚಿಕೆ’ ವಿಚಾರದಲ್ಲಿ ತಮ್ಮ ಮತ್ತು ಸಿದ್ದರಾಮಯ್ಯ ಮಧ್ಯೆ ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಒಪ್ಪಂದ ಆಗಿರುವುದು ನಿಜ ಎಂದು ಡಿ.ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ‘ಆ ಒಪ್ಪಂದ ಏನು ಎಂಬುದು ಸಮಯ ಬಂದಾಗ ತಿಳಿಯುತ್ತದೆ. ಸಿದ್ದರಾಮಯ್ಯ ಅವರೇ ಸಮಯ ಬಂದಾಗ ರಾಜ್ಯದ ಜನಕ್ಕೆ ಆ ಸಂದೇಶ ನೀಡುತ್ತಾರೆ’ ಎಂದೂ ಹೇಳುವ ಮೂಲಕ ಅವರು ಕುತೂಹಲ ಮೂಡಿಸಿದ್ದಾರೆ.</p><p>ಬೆಳಗಾವಿಯಲ್ಲಿ ಡಿಸೆಂಬರ್ನಲ್ಲಿ ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಶಾಸಕರು ಮತ್ತು ಸಿದ್ದರಾಮಯ್ಯ ನಡುವೆ ಬಿಸಿಬಿಸಿ ಚರ್ಚೆಯ ಮಧ್ಯೆ ‘ನಾಯಕತ್ವ ಬದಲಾವಣೆ’ ವಿಷಯ ಪ್ರಸ್ತಾಪವಾದಾಗ, ‘ಮುಖ್ಯಮಂತ್ರಿ ಸ್ಥಾನಕ್ಕೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ. ನಾನು ಐದು ವರ್ಷಕ್ಕೆ ಆಯ್ಕೆಯಾಗಿದ್ದೇನೆ. ಹೈಕಮಾಂಡ್ ನನ್ನ ಪರ’ ಎಂದು ಸಿದ್ದರಾಮಯ್ಯ ಸ್ಪಷ್ಟ ಧ್ವನಿಯಲ್ಲಿ ಹೇಳಿದ್ದರು.</p><p>ಅದೇ ದಿನ ಅಂಕೋಲಾದಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ‘ನನ್ನ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಅದರಂತೆ ಇಬ್ಬರೂ ಸೇರಿ ಹೈಕಮಾಂಡ್ ಅನ್ನು ಒಪ್ಪಿಸಿದ್ದೇವೆ’ ಎಂದು ವಾದ ಮುಂದಿಟ್ಟಿದ್ದರು.</p><p>ಅಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ‘ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗ.<br>ಅವರ ಬಗ್ಗೆ ನಾನು ಏನನ್ನೂ ಮಾತ ನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ’ ಎಂದರು.</p><p>‘ನಾಯಕರ ಹೇಳಿಗೆ ಬಗ್ಗೆ ಮಖ್ಯಮಂತ್ರಿ ಹಾಗೂ ಹೈಕಮಾಂಡ್ ನಾಯಕರು ಕ್ರಮ ತೆಗೆದು ಕೈಗೊಳ್ಳುತ್ತಾರೆ. ಮಹದೇವಪ್ಪನಿಗೆ ಹಾಗೂ ಬೇರೆಯವರಿಗೆ ನಾನು ಉತ್ತರ ನೀಡುವುದಿಲ್ಲ’ ಎಂದು ಹೇಳಿದರು.</p>.<p><strong>ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು: (ದಾವಣಗೆರೆ ವರದಿ): ‘</strong>ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಲವಾದ ವಿಶ್ವಾಸವಿದೆ. ಮುಖ್ಯಮಂತ್ರಿ ಹುದ್ದೆಯ ಕುರಿತು ಎದ್ದಿರುವ ಗೊಂದಲಗಳಿಗೆ ಹೈಕಮಾಂಡ್ ಕೂಡಲೇ ತೆರೆ ಎಳೆಯಬೇಕು’ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.</p><p>‘ಸಚಿವ ಎಚ್.ಸಿ. ಮಹದೇವಪ್ಪ ಅವರು ಶಾಸಕರನ್ನು ನಾಯಿಗೆ ಹೋಲಿಸಿ<br>ಮಾತನಾಡಬಾರದಿತ್ತು. ಅವರಿಂದ ಇಂತಹ ಮಾತು ನಿರೀಕ್ಷಿಸಿರಲಿಲ್ಲ. ಶಾಸಕರನ್ನು ನಾಯಿಗೆ ಹೋಲಿಕೆ ಮಾಡಿದರೆ ಅವರು ಯಾರು?’ ಎಂದು ಪ್ರಶ್ನಿಸಿದರು.</p><p>‘ಮಹದೇವಪ್ಪ ಅವರು ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದನ್ನು ಇನ್ನಾದರೂ ನಿಲ್ಲಿಸಬೇಕು. ಬಾಲ, ನಾಯಿ ಎರಡೂ ನಮ್ಮವೇ. ಬಾಲದ ಬಗ್ಗೆ ಬೇಸರ ಮಾಡಿಕೊಂಡರೆ ನಾಯಿಗೆ ಗೌರವ ಸಿಗುವುದಿಲ್ಲ. ಅವರ ಹೇಳಿಕೆಯನ್ನು ಹೈಕಮಾಂಡ್ ಗಮನಿಸಲಿದೆ’ ಎಂದರು. ‘ಶಾಸಕರು ಪ್ರವಾಸಕ್ಕೆ ತೆರಳುವುದು ವೈಯಕ್ತಿಕ. ಬಜೆಟ್ ಪೂರ್ವದಲ್ಲಿ ಪ್ರವಾಸ ತೆರಳುತ್ತಿರುವುದಕ್ಕೆ ಆಕ್ಷೇಪವಿದೆ’ ಎಂದರು.</p> .<div><blockquote>ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ. ರಾಜ್ಯದಲ್ಲಿ ಈ ಬಗ್ಗೆ ಚರ್ಚಿಸುವುದು ಅಕ್ಷಮ್ಯ ಅಪರಾಧ</blockquote><span class="attribution">ಲಕ್ಷ್ಮಿ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ</span></div>.<div><blockquote>ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದಾರೆಂದರೆ ಯಥಾಸ್ಥಿತಿ ಎಂದೇ ಅರ್ಥ. ಮಹತ್ವದ ರಾಜಕೀಯ ಬದಲಾವಣೆಯಾಗುತ್ತದೆ ಎಂದು ಅಂದುಕೊಂಡರೆ ಸುಳ್ಳು </blockquote><span class="attribution"> ಕೆ.ಎನ್. ರಾಜಣ್ಣ ಶಾಸಕ</span></div>.<p><strong>ನನಗೆ ಶಾಸಕರ ವಿದೇಶ ಪ್ರವಾಸ ಗೊತ್ತಿಲ್ಲ</strong></p><p>ಶಾಸಕರ ವಿದೇಶ ಪ್ರವಾಸದ ಬಗ್ಗೆ ಕೇಳಿದಾಗ, “ನನಗೆ ಯಾವ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ನನಗೆ ಮಾಧ್ಯಮಗಳಿಂದಷ್ಟೇ ತಿಳಿದಿದೆ. ಇದು ಅವರ ವೈಯಕ್ತಿಕ ಪ್ರವಾಸವೋ, ಬೇರೆಯವರು ಅವರನ್ನು ಪ್ರವಾಸಕ್ಕೆ ಕಳುಹಿಸುತ್ತಿದ್ದಾರೋ ಗೊತ್ತಿಲ್ಲ. ಇದು ಪ್ರವಾಸ ಕಳುಹಿಸುತ್ತಿರುವವರು ಉಂಟು ಹಾಗೂ ಪ್ರವಾಸ ಹೋಗುತ್ತಿರುವವರು ಉಂಟು. ಪಕ್ಷದ ಅಧ್ಯಕ್ಷನಾಗಿ ನಾನು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.</p>.<p><strong>ಬಿಜೆಪಿ ಸರ್ಕಾರ ಚಾಣಾಕ್ಯ ವಿವಿ, ಆರ್ ಎಸ್ಎಸ್ ಕಚೇರಿಗೆ ನೂರಾರು ಎಕರೆ ಕೊಟ್ಟಿಲ್ಲವೇ?</strong></p><p>ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಮೀನು ಬಳಸಿಕೊಳ್ಳಲಾಗುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಕೇಳಿದಾಗ, “ಖಂಡಿತವಾಗಿ ನಾವು ಕಾಂಗ್ರೆಸ್ ಭವನಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳುತ್ತಿದ್ದೇವೆ. ನಾವು ಮಹಾತ್ಮಾ ಗಾಂಧಿಜಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯ ಶತಮಾನೋತ್ಸವ ಹಿನ್ನೆಲೆಯಲ್ಲಿ 100 ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಾವು 5-10 ಸಾವಿರ ಚದರ ಅಡಿಗಳಷ್ಟು ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 100ಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಟ್ರಸ್ಟ್ ಗಳ ಹೆಸರಿನಲ್ಲಿ ಜಾಗ ಪಡೆದಿದ್ದಾರೆ. ಚಾಣಾಕ್ಯ ವಿವಿಗೆ ನೀಡಿರುವ ಜಾಗ ಪ್ರತಿ ಎಕರೆಗೆ 10 ಕೋಟಿ ರೂಪಾಯಿ ಬೆಳೆಬಾಳುತ್ತದೆ. ಆದರೆ ಬಿಜೆಪಿಯವರು ಪ್ರತಿ ಎಕರೆಗೆ 50 ಲಕ್ಷದ ದರದಲ್ಲಿ 100 ಎಕರೆ ಜಾಗ ಮಂಜೂರು ಮಾಡಿದ್ದು, ಸಿಎಸ್ಆರ್ ನಿಧಿ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಿದ್ದಾರೆ. ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಬಿಜೆಪಿ ಜಾಗ ಮಂಜೂರು ಮಾಡದೇ, ಆರ್ ಎಸ್ಎಸ ಕಚೇರಿ ಹೇಗೆ ನಿರ್ಮಾಣವಾಯಿತು? ಸದಾಶಿವನಗರದಲ್ಲಿ ನಮ್ಮ ಮನೆಯ ಪಕ್ಕದಲ್ಲಿರುವ ಪಾರ್ಕ್ ಅನ್ನು ವೆಲ್ ನೆಸ್ ಸೆಂಟರ್ ನ ಯೋಗಾ ಕಚೇರಿಗೆ ನೀಡಿದ್ದು, ಕಚೇರಿ ಕಟ್ಟಿಕೊಂಡಿದ್ದಾರೆ. ಇಂತಹ ನೂರಾರು ಉದಾಹರಣೆಗಳನ್ನು ನಾನು ನೀಡಬಲ್ಲೆ. ಅವರು ನಮಗೆ ಬೋಧನೆ ಮಾಡುವ ಅಗತ್ಯವಿಲ್ಲ. ಅವರು ಏನಾದರೂ ಆರೋಪ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ ದೇವಾಲಯವನ್ನು ಕಟ್ಟಲು ಈ ತೀರ್ಮಾನಕ್ಕೆ ಬಂದಿದ್ದೇವೆ. ಇದು ನಮ್ಮ ಕರ್ತವ್ಯ. ನಾನು ಇದನ್ನು ಮಾಡಿಯೇ ಮಾಡುತ್ತೇನೆ. ಎಲ್ಲಾ ಮಾನದಂಡಗಳು, ಅರ್ಹತೆ ಆಧಾರದ ಮೇಲೆ ನಾವು ಈ ಜಾಗವನ್ನು ಮಂಜೂರು ಮಾಡುತ್ತಿದ್ದೇವೆ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೆಟ್ಟಿಲೇರುವುದಾದರೆ ಹತ್ತಲಿ” ಎಂದರು.</p>.<p><strong>ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಡಿ.ಕೆ. ಸುರೇಶ್</strong></p><p>‘ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ. ನಿಯತ್ತಿನ ನಾಯಿಗಳು’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ತಿರುಗೇಟು ನೀಡಿದರು.</p><p>ಅಧಿಕಾರ ಹಂಚಿಕೆ ವಿಚಾರವಾಗಿ ಮಾತನಾಡಿದ್ದ ಮಹದೇವಪ್ಪ, ‘ಬಾಲ ನಾಯಿಯನ್ನೇ ಅಲ್ಲಾಡಿಸಬಾರದು’ ಎಂದು ಸೋಮವಾರ ಹೇಳಿಕೆ ನೀಡಿದ್ದರು.</p><p>ಈ ಬಗ್ಗೆ ಸುದ್ದಿಗಾರರು ಮಂಗಳವಾರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ‘ಅವರು ಯಾರನ್ನು ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ, ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು’ ಎಂದರು.</p><p>‘ಹಾಗಾದರೆ ಹೊರಗಡೆಯಿಂದ ಬಂದವರು ಬೀದಿ ನಾಯಿಗಳೇ’ ಎಂದು ಕೇಳಿದಾಗ, ‘ನಾನು ಹಾಗೆಂದು ಹೇಳಿಲ್ಲ. ಕಟ್ಟಾ ಕಾಂಗ್ರೆಸಿಗರು ಋಣ ತೀರಿಸುವ ವ್ಯಕ್ತಿತ್ವ ಹೊಂದಿರುವವರು. ಈ ನಾಯಿಗಳು ಬೀದಿ ನಾಯಿಗಳೇ ಆಗಿರಲಿ, ಸಾಕಿದ ನಾಯಿಗಳೇ ಆಗಿರಲಿ, ಯಜಮಾನನ ಋಣ ತೀರಿಸುತ್ತವೆಯೇ ಹೊರತು, ಬೇರೆ ರೀತಿ ಮಾಡುವುದಿಲ್ಲ. ಅದು ನಿಯತ್ತಿನ ನಾಯಿಗಳ ಸ್ವಭಾವ’ ಎಂದರು.</p>.<p><strong>ಇನ್ನೇನೂ ಹೇಳಲಾರೆ: ಯತೀಂದ್ರ</strong></p><p>ಮೈಸೂರು: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಸಾಕಷ್ಟು ಮಾತನಾಡಿದ್ದೇನೆ. ಇನ್ನೇನೂ ಹೇಳಲಾರೆ. ಬೇರೆಯವರ ಹೇಳಿಕೆಗಳಿಗೆ ಉತ್ತರಿಸುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು.</p><p>‘ಯತೀಂದ್ರ ವರ್ಗಾವಣೆ ಸಚಿವ’ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಸಿಟ್ಟಾದ ಅವರು, ‘ಹಾದಿ ಬೀದಿಯಲ್ಲಿ ಹೋಗುವವರೆಲ್ಲ ಆಧಾರವಿಲ್ಲದೆ ಮಾತನಾಡಿದರೆ ಉತ್ತರಿಸಲಾಗದು. ಮಾಜಿ ಸಂಸದ ಪ್ರತಾಪ ಸಿಂಹ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿಯಲ್ಲಿ ಕೆಲಸವಿಲ್ಲ. ಏನೇನೊ ಹೇಳುತ್ತಿರುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>