ಕೆಪಿಸಿಸಿ ಅಧ್ಯಕ್ಷರಾಗಿ ಗುರುವಾರ ಪದಗ್ರಹಣ ಮಾಡಿದ ಬಳಿಕ ಮಾತನಾಡಿದ ಅವರು, ‘ಈ ಶಿವಕುಮಾರ್ ಬೆದರಿಕೆಗೆ ಜಗ್ಗುವ ಮಗ ಅಲ್ಲ. ಕೆಲವರು ನನ್ನನ್ನು ಕನಕಪುರ ಬಂಡೆ ಅಂತಾರೆ. ಕಲ್ಲು ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನಾನು ಕೇವಲ ಶಿಲೆಯಾಗಲು ಬಯಸುವುದಿಲ್ಲ. ವಿಧಾನಸೌಧದ ಮೆಟ್ಟಿಲ ಚಪ್ಪಡಿ ಕಲ್ಲಾಗುತ್ತೇನೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು
ಪ್ರಯತ್ನಿಸುತ್ತೇನೆ’ ಎಂದರು.