<p><strong>ಹಾವೇರಿ: </strong>ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ನವರು ಸಿದ್ಧಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಮೆಂಟ್ ಮೂರ್ತಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಅನಾವರಣಗೊಳಿಸಿದರು.</p><p>ನಗರದಲ್ಲಿ ಶನಿವಾರ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಮತ್ತು ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಸಿಎಂ ಹಾಗೂ ಡಿಸಿಎಂ ಪಾಲ್ಗೊಂಡರು.</p><p>ಬೆಳಿಗ್ಗೆ ಸಿದ್ದರಾಮಯ್ಯ ಅವರು ಬರುತ್ತಿದ್ದಂತೆಯೇ ಸಮಾವೇಶ ಶುರುವಾಯಿತು. ತಡವಾಗಿ ಬಂದ ಡಿ.ಕೆ. ಶಿವಕುಮಾರ, ವೇದಿಕೆಯಲ್ಲಿದ್ದ ಎಲ್ಲರನ್ನೂ ಮಾತನಾಡಿಸಿದರು. ಆದರೆ, ಮುಖ್ಯಮಂತ್ರಿ ಅವರನ್ನು ಮಾತನಾಡಿಸದೇ, ಅವರ ಪಕ್ಕವೇ ಹೋಗಿ ಕೂತರು. ಕೆಲ ನಿಮಿಷಗಳ ಬಳಿಕ ಮಾತನಾಡಿದರು.</p><p>ಮೂರ್ತಿ ಅನಾವರಣ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ನಗುತ್ತ ಮಾತನಾಡಿದರು. ನಂತರ, ಡಿ.ಕೆ. ಶಿವಕುಮಾರ ಭಾಷಣ ಮಾಡಿದರು. ಸಿದ್ದರಾಮಯ್ಯ ಅವರು ಭಾಷಣ ಮಾಡಲು ಮುಂದಾದಾಗ, ಶಿವಕುಮಾರ ವೇದಿಕೆಯಿಂದ ಇಳಿದು ಹೊರಟರು.</p>.ರಾಜ್ಯಕ್ಕೆ ಅನ್ಯಾಯ; ಬಾಯಿಬಿಡದ ಬಿಜೆಪಿ ಸಂಸದರು: ಸಿದ್ದರಾಮಯ್ಯ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ನವರು ಸಿದ್ಧಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಮೆಂಟ್ ಮೂರ್ತಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಅನಾವರಣಗೊಳಿಸಿದರು.</p><p>ನಗರದಲ್ಲಿ ಶನಿವಾರ ‘ರಾಜ್ಯ ಸರ್ಕಾರದ ಸಾವಿರ ದಿನಗಳ ಸಾಧನಾ ಸಮಾವೇಶ’ ಮತ್ತು ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಸಿಎಂ ಹಾಗೂ ಡಿಸಿಎಂ ಪಾಲ್ಗೊಂಡರು.</p><p>ಬೆಳಿಗ್ಗೆ ಸಿದ್ದರಾಮಯ್ಯ ಅವರು ಬರುತ್ತಿದ್ದಂತೆಯೇ ಸಮಾವೇಶ ಶುರುವಾಯಿತು. ತಡವಾಗಿ ಬಂದ ಡಿ.ಕೆ. ಶಿವಕುಮಾರ, ವೇದಿಕೆಯಲ್ಲಿದ್ದ ಎಲ್ಲರನ್ನೂ ಮಾತನಾಡಿಸಿದರು. ಆದರೆ, ಮುಖ್ಯಮಂತ್ರಿ ಅವರನ್ನು ಮಾತನಾಡಿಸದೇ, ಅವರ ಪಕ್ಕವೇ ಹೋಗಿ ಕೂತರು. ಕೆಲ ನಿಮಿಷಗಳ ಬಳಿಕ ಮಾತನಾಡಿದರು.</p><p>ಮೂರ್ತಿ ಅನಾವರಣ ವೇಳೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ನಗುತ್ತ ಮಾತನಾಡಿದರು. ನಂತರ, ಡಿ.ಕೆ. ಶಿವಕುಮಾರ ಭಾಷಣ ಮಾಡಿದರು. ಸಿದ್ದರಾಮಯ್ಯ ಅವರು ಭಾಷಣ ಮಾಡಲು ಮುಂದಾದಾಗ, ಶಿವಕುಮಾರ ವೇದಿಕೆಯಿಂದ ಇಳಿದು ಹೊರಟರು.</p>.ರಾಜ್ಯಕ್ಕೆ ಅನ್ಯಾಯ; ಬಾಯಿಬಿಡದ ಬಿಜೆಪಿ ಸಂಸದರು: ಸಿದ್ದರಾಮಯ್ಯ ಟೀಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>