ಕಾಂಗ್ರೆಸ್ ವಿಶೇಷ ಸಭೆ ನಾಳೆ
ಎಸ್ಐಆರ್ ಪ್ರಕ್ರಿಯೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೇ 24ರಂದು ಸಂಜೆ 4ಕ್ಕೆ ದೇವನಹಳ್ಳಿ ಬಳಿಯ ಹೋಟೆಲ್ನಲ್ಲಿ ವಿಶೇಷ ಸಭೆ ಕರೆದಿದ್ದಾರೆ. ಸಚಿವರು ಪಕ್ಷದ ಶಾಸಕರು ವಿಧಾನಪರಿಷತ್ ಸದಸ್ಯರು 2023 ಹಾಗೂ 2024ರ ವಿಧಾನಸಭೆ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸಭೆಯಲ್ಲಿ ಭಾಗವಹಿಸುವರು. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಎಐಸಿಸಿ ಕಾರ್ಯದರ್ಶಿಗಳು ಉಪಸ್ಥಿತರಿರುವರು.