<p><strong>ಬೆಂಗಳೂರು:</strong> ‘ಇ ಖಾತಾ ಮಾಡಿಕೊಡಲು ಲಂಚ ಕೇಳಿದವರ ಪಟ್ಟಿ ನೀಡಿದರೆ ಅಮಾನತು ಮಾಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಇ–ಖಾತಾ ಮಾಡಿಕೊಡಲು ಲಂಚ ತೆಗೆದುಕೊಂಡು, ಲೂಟಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಆಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮನೆ ಬಾಗಿಲಿಗೆ ಖಾತೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವೇ ಉತ್ತಮ ಯೋಜನೆ ಎಂದು ಪ್ರಶಸ್ತಿ ನೀಡಿದೆ. ₹ 10 ಸಾವಿರ ಲಂಚ ಕೇಳಿದವರು ಯಾರು ಎಂದು ಪಟ್ಟಿ ಕೊಟ್ಟರೆ ಅಮಾನತು ಮಾಡುತ್ತೇವೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿ 10 ಲಕ್ಷ ಖಾತೆ ವಿತರಣೆ ಮಾಡಿದ್ದೇವೆ. ಕಂದಾಯ ಇಲಾಖೆಯಿಂದ 1.11 ಕೋಟಿ ಖಾತೆ ವಿತರಿಸಲಾಗಿದೆ. ಕೆಲವೊಂದು ಸಮಯದಲ್ಲಿ ತಾಂತ್ರಿಕ ತೊಂದರೆ ಆಗಿದೆ. ಇದಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ನೀಡಿ, ಸದನದಲ್ಲಿಯೇ ಈ ಬಗ್ಗೆ ತಿಳಿಸುತ್ತೇನೆ’ ಎಂದರು.</p>.<p>‘ಹಸಿರು ವಲಯ, ವಂಚನೆ ಪ್ರಕರಣ, ಸರ್ಕಾರಿ ಭೂಮಿ ಮುಂತಾದ ಪ್ರಕರಣಗಳಲ್ಲಿ ಇ– ಖಾತಾ ನೀಡಲು ತೊಂದರೆಯಾಗುತ್ತಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇ ಖಾತಾ ಮಾಡಿಕೊಡಲು ಲಂಚ ಕೇಳಿದವರ ಪಟ್ಟಿ ನೀಡಿದರೆ ಅಮಾನತು ಮಾಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಇ–ಖಾತಾ ಮಾಡಿಕೊಡಲು ಲಂಚ ತೆಗೆದುಕೊಂಡು, ಲೂಟಿ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಆಗ ಪ್ರತಿಕ್ರಿಯಿಸಿದ ಶಿವಕುಮಾರ್, ‘ದಾಖಲೆಗಳನ್ನು ಸ್ಕ್ಯಾನ್ ಮಾಡಿ ಮನೆ ಬಾಗಿಲಿಗೆ ಖಾತೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವೇ ಉತ್ತಮ ಯೋಜನೆ ಎಂದು ಪ್ರಶಸ್ತಿ ನೀಡಿದೆ. ₹ 10 ಸಾವಿರ ಲಂಚ ಕೇಳಿದವರು ಯಾರು ಎಂದು ಪಟ್ಟಿ ಕೊಟ್ಟರೆ ಅಮಾನತು ಮಾಡುತ್ತೇವೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿ 10 ಲಕ್ಷ ಖಾತೆ ವಿತರಣೆ ಮಾಡಿದ್ದೇವೆ. ಕಂದಾಯ ಇಲಾಖೆಯಿಂದ 1.11 ಕೋಟಿ ಖಾತೆ ವಿತರಿಸಲಾಗಿದೆ. ಕೆಲವೊಂದು ಸಮಯದಲ್ಲಿ ತಾಂತ್ರಿಕ ತೊಂದರೆ ಆಗಿದೆ. ಇದಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ನೀಡಿ, ಸದನದಲ್ಲಿಯೇ ಈ ಬಗ್ಗೆ ತಿಳಿಸುತ್ತೇನೆ’ ಎಂದರು.</p>.<p>‘ಹಸಿರು ವಲಯ, ವಂಚನೆ ಪ್ರಕರಣ, ಸರ್ಕಾರಿ ಭೂಮಿ ಮುಂತಾದ ಪ್ರಕರಣಗಳಲ್ಲಿ ಇ– ಖಾತಾ ನೀಡಲು ತೊಂದರೆಯಾಗುತ್ತಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>