ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ವರ್ಷಗಳ ನಂತರ 8 ವರ್ಷ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿರುತ್ತಾರೆ: ಜ್ಯೋತಿಷಿ

ಜ್ಯೋತಿಷಿ ಬಿ.ಬಿ. ಆರಾಧ್ಯ ಭವಿಷ್ಯ
Published 23 ಮೇ 2023, 14:12 IST
Last Updated 23 ಮೇ 2023, 14:12 IST
ಅಕ್ಷರ ಗಾತ್ರ

ಬೆಂಗಳೂರು: ‘ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿರುತ್ತಾರೆ’ ಎಂದು ಜ್ಯೋತಿಷಿ ಬಿ.ಬಿ. ಆರಾಧ್ಯ ಭವಿಷ್ಯ ನುಡಿದಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಆರಾಧ್ಯ, ‘ಶಿವಕುಮಾರ್‌ ಅವರಿಗೆ ಇದೇ ಸಂಖ್ಯೆ ಕೊಠಡಿ ತೆಗೆದುಕೊಳ್ಳುವಂತೆ ಹೇಳಿದ್ದೆ. ಅಲ್ಲದೇ ಸಿದ್ದರಾಮಯ್ಯನವರ ವಾಸವಿರುವ ನಿವಾಸವನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದೇನೆ’ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ನಾಲ್ಕು ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಕೊಠಡಿ ಸಂಖ್ಯೆ 335,336,337 ಮತ್ತು 337 ಎ ಹಂಚಿಕೆಯಾಗಿದೆ. ಜ್ಯೋತಿಷಿ ಬಿ.ಬಿ. ಆರಾಧ್ಯ ಅವರ ಸಲಹೆಯಂತೆ ‘ಅದೃಷ್ಟದ ಸಂಖ್ಯೆ’ಯ ಕೊಠಡಿಗಳನ್ನೇ ಪಡೆದುಕೊಳ್ಳುವಲ್ಲಿ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಅಲ್ಲದೆ, ಸಿದ್ದರಾಮಯ್ಯ ಹಾಲಿ ವಾಸ್ತವ್ಯ ಹೂಡಿರುವ ಶಿವಾನಂದ ವೃತ್ತದ ಬಳಿ ಇರುವ ಸರ್ಕಾರಿ ನಿವಾಸ ಆಯ್ಕೆ ಮಾಡಿಕೊಳ್ಳುವಂತೆಯೂ ಶಿವಕುಮಾರ್ ಅವರಿಗೆ ಆರಾಧ್ಯ ಸೂಚಿಸಿದ್ದರು.

ಆರಾಧ್ಯ ಅವರ ಸಲಹೆಯಂತೆ ಗುರುವಾರ (ಮೇ 25) ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ತಮಗೆ ಹಂಚಿಕೆಯಾದ ಕೊಠಡಿ 336 ರಲ್ಲಿ ಶಿವಕುಮಾರ್‌ ಅವರು ಪೂಜೆ ನೆರವೇರಿಸಲಿದ್ದಾರೆ. ಹೀಗಾಗಿ, ಕೊಠಡಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯವೂ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT