ವಿಚಾರಣೆ ವೇಳೆ ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಅವರ ಪರ ಕಿರಿಯ ವಕೀಲರು ಹಾಜರಾಗಿ ವಿಚಾರಣೆ ಮುಂದೂಡುವಂತೆ ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ಎಚ್.ಜಾಧವ್, ಸಿಬಿಐ ಪರ ವಕೀಲರ ಗೈರು ಹಾಜರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಅಂತೆಯೇ, ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದರೆ, ಸಿಬಿಐ ಪರವಾದ ಕಿರಿಯ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.