<p><strong>ಬೆಂಗಳೂರು:</strong> ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದಿನೇ ದಿನೇ ರಾಷ್ಟ್ರೀಯ ನಾಯಕನ ವರ್ಚಸ್ಸು ಲಭಿಸುತ್ತಿದೆ ಎಂಬ ಆತಂಕದಲ್ಲಿ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ‘ ಎಂದು ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್ಗೆ ಅರುಹಿದರು.</p>.<p>‘ನನ್ನ ಬಳಿ ಇದ್ದ ಹಣಕ್ಕೆ ಬ್ಯಾಂಕ್ ಖಾತೆಯ ದಾಖಲೆ ಇಲ್ಲ ಎಂಬ ಕಾರಣದಡಿ; ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಸಿಬಿಐ ತನಿಖೆ ನಡೆಸಲು ಈ ಹಿಂದಿನ ರಾಜ್ಯ ಸರ್ಕಾರ ನೀಡಿರುವ ಒಪ್ಪಿಗೆ ಕಾನೂನು ಬಾಹಿರವಾಗಿದೆ‘ ಎಂದು ಆಕ್ಷೇಪಿಸಿ ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅರ್ಜಿದಾರ ಶಿವಕುಮಾರ್ ಪರ ಸುದೀರ್ಘ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ‘ಶಿವಕುಮಾರ್ ಅವರ ನವದೆಹಲಿ, ಬೆಂಗಳೂರು ಸೇರಿದಂತೆ ಇತರೆಡೆಯ ಮನೆಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ (ಐಟಿ) ದಾಳಿ ನಡೆಸಲಾಗಿತ್ತು. ಈ ವೇಳೆ ಅವರು ಈಗಲ್ಟನ್ ರೆಸಾರ್ಟ್ನಲ್ಲಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿದ್ದರು. ಅಂದಿನಿಂದ ಶಿವಕುಮಾರ್ ವಿರುದ್ಧ ಐಟಿ, ಅಕ್ರಮ ಹಣ ವರ್ಗಾವಣೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಂಸ್ಥೆಗಳು ಒಂದಾದ ಮೇಲೊಂದರಂತೆ ಪ್ರಕರಣ ದಾಖಲಿಸಿವೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ಈ ಹಿಂದಿನ ರಾಜ್ಯ ಸರ್ಕಾರದ ಕ್ರಮ ಸಂಪೂರ್ಣ ಕಾನೂನು ಬಾಹಿರ‘ ಎಂದು ಆರೋಪಿಸಿದರು.</p><p>ಕೋರ್ಟ್ನ ದಿನದ ಕಲಾಪದ ಅವಧಿ ಮೀರುತ್ತಿದ್ದ ಕಾರಣ ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಸಮಯದಲ್ಲಿ ಒಟ್ಟು ₹ 8.59 ಕೋಟಿ ಮೊತ್ತವನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದಿನೇ ದಿನೇ ರಾಷ್ಟ್ರೀಯ ನಾಯಕನ ವರ್ಚಸ್ಸು ಲಭಿಸುತ್ತಿದೆ ಎಂಬ ಆತಂಕದಲ್ಲಿ ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ‘ ಎಂದು ಡಿ.ಕೆ.ಶಿವಕುಮಾರ್ ಪರ ವಕೀಲರು ಹೈಕೋರ್ಟ್ಗೆ ಅರುಹಿದರು.</p>.<p>‘ನನ್ನ ಬಳಿ ಇದ್ದ ಹಣಕ್ಕೆ ಬ್ಯಾಂಕ್ ಖಾತೆಯ ದಾಖಲೆ ಇಲ್ಲ ಎಂಬ ಕಾರಣದಡಿ; ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದಡಿ ಸಿಬಿಐ ತನಿಖೆ ನಡೆಸಲು ಈ ಹಿಂದಿನ ರಾಜ್ಯ ಸರ್ಕಾರ ನೀಡಿರುವ ಒಪ್ಪಿಗೆ ಕಾನೂನು ಬಾಹಿರವಾಗಿದೆ‘ ಎಂದು ಆಕ್ಷೇಪಿಸಿ ಶಿವಕುಮಾರ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅರ್ಜಿದಾರ ಶಿವಕುಮಾರ್ ಪರ ಸುದೀರ್ಘ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಚೌಟ ಅವರು, ‘ಶಿವಕುಮಾರ್ ಅವರ ನವದೆಹಲಿ, ಬೆಂಗಳೂರು ಸೇರಿದಂತೆ ಇತರೆಡೆಯ ಮನೆಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ (ಐಟಿ) ದಾಳಿ ನಡೆಸಲಾಗಿತ್ತು. ಈ ವೇಳೆ ಅವರು ಈಗಲ್ಟನ್ ರೆಸಾರ್ಟ್ನಲ್ಲಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿದ್ದರು. ಅಂದಿನಿಂದ ಶಿವಕುಮಾರ್ ವಿರುದ್ಧ ಐಟಿ, ಅಕ್ರಮ ಹಣ ವರ್ಗಾವಣೆ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಂಸ್ಥೆಗಳು ಒಂದಾದ ಮೇಲೊಂದರಂತೆ ಪ್ರಕರಣ ದಾಖಲಿಸಿವೆ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವ ಈ ಹಿಂದಿನ ರಾಜ್ಯ ಸರ್ಕಾರದ ಕ್ರಮ ಸಂಪೂರ್ಣ ಕಾನೂನು ಬಾಹಿರ‘ ಎಂದು ಆರೋಪಿಸಿದರು.</p><p>ಕೋರ್ಟ್ನ ದಿನದ ಕಲಾಪದ ಅವಧಿ ಮೀರುತ್ತಿದ್ದ ಕಾರಣ ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಸಮಯದಲ್ಲಿ ಒಟ್ಟು ₹ 8.59 ಕೋಟಿ ಮೊತ್ತವನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>