ವಿಚಾರಣೆ ವೇಳೆ ನ್ಯಾಯಪೀಠವು, ’ಈಗಾಗಲೇ ಪ್ರಕರಣದ ಭಾಗಶಃ ವಿಚಾರಣೆಯನ್ನು ಇದೇ ಹೈಕೋರ್ಟ್ನ ಮತ್ತೊಂದು ಏಕಸದಸ್ಯ ನ್ಯಾಯಪೀಠ ನಡೆಸಿದೆ. ಈಗ ಅದೇ ರಿಟ್ ಅರ್ಜಿ ಈ ನ್ಯಾಯಪೀಠದ ಮುಂದೆ ಬಂದಿದೆ. ಹೀಗಾಗಿ, ಯಾವ ನ್ಯಾಯಪೀಠ ಈ ಅರ್ಜಿಯ ವಿಚಾರಣೆಯನ್ನು ಮುಂದುವರಿಸಬೇಕು ಎಂಬ ಕಾನೂನು ಜಿಜ್ಞಾಸೆ ಇದೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳ ಸೂಚನೆಯ ಅಗತ್ಯವಿದೆ. ಆದ್ದರಿಂದ, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆಯೇ ಮಂಡಿಸಿ ವಿವರಣೆ ಪಡೆಯಬೇಕಿದೆ. ಹಾಗಾಗಿ, ಅವರಿಂದ ಆದೇಶ ಬಂದ ನಂತರ ಅರ್ಜಿಯನ್ನು ಯಾವ ಪೀಠ ವಿಚಾರಣೆ ನಡೆಸಬೇಕು ಎಂಬುದು ನಿರ್ಧಾರವಾಗಲಿ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಮುಂದಿನ ವಿಚಾರಣೆವರೆಗೆ ಸಿಬಿಐ ತನಿಖೆಗೆ ನೀಡಿರುವ ತಡೆ ಆದೇಶವನ್ನು ವಿಸ್ತರಿಸಿ ಆದೇಶಿಸಿತು.