<p><strong>ನವದೆಹಲಿ:</strong>ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರು ಜಾಮೀನು ಕೋರಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇ.ಡಿ.ಗೆ ನೋಟಿಸ್ ಜಾರಿ ಮಾಡಿದೆ.</p>.<p>ಸೋಮವಾರ ನಡೆದ ವಿಚಾರಣೆಯ ವೇಳೆ ಶಿವಕುಮಾರ್ ಪರ ವಕೀಲ ದಯಾಕೃಷ್ಣನ್ ಅವರ ವಾದ ಆಲಿಸಿದ ನ್ಯಾಯಮೂರ್ತಿ ಸುರೇಶಕುಮಾರ್ ಕೈತ್, ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿದರಲ್ಲದೆ, ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಇ.ಡಿ.ಗೆ ಸೂಚಿಸಿ ನೋಟಿಸ್ ಜಾರಿ ಮಾಡಿದರು.</p>.<p>ಆರೋಗ್ಯ ಸಮಸ್ಯೆ ಇರುವುದರಿಂದ ಜಾಮೀನು ನೀಡುವಂತೆ ಕೋರಿರುವ ಶಿವಕುಮಾರ್, ‘ನಾನು ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.</p>.<p>ಸೆ. 3ರಂದು ಬಂಧನಕ್ಕೆ ಒಳಗಾಗಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಇರುವ ಶಿವಕುಮಾರ್ ಅವರ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಅ. 1 ರಂದು ಮಂಗಳವಾರ ಪೂರ್ಣಗೊಳ್ಳಲಿದೆ. ಇ.ಡಿ. ವಿಶೇಷ ನ್ಯಾಯಾಲಯವು ಸೆ. 25ರಂದು ಅವರ ಜಾಮೀನು ಅರ್ಜಿ ಯನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರು ಜಾಮೀನು ಕೋರಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇ.ಡಿ.ಗೆ ನೋಟಿಸ್ ಜಾರಿ ಮಾಡಿದೆ.</p>.<p>ಸೋಮವಾರ ನಡೆದ ವಿಚಾರಣೆಯ ವೇಳೆ ಶಿವಕುಮಾರ್ ಪರ ವಕೀಲ ದಯಾಕೃಷ್ಣನ್ ಅವರ ವಾದ ಆಲಿಸಿದ ನ್ಯಾಯಮೂರ್ತಿ ಸುರೇಶಕುಮಾರ್ ಕೈತ್, ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿದರಲ್ಲದೆ, ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಇ.ಡಿ.ಗೆ ಸೂಚಿಸಿ ನೋಟಿಸ್ ಜಾರಿ ಮಾಡಿದರು.</p>.<p>ಆರೋಗ್ಯ ಸಮಸ್ಯೆ ಇರುವುದರಿಂದ ಜಾಮೀನು ನೀಡುವಂತೆ ಕೋರಿರುವ ಶಿವಕುಮಾರ್, ‘ನಾನು ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.</p>.<p>ಸೆ. 3ರಂದು ಬಂಧನಕ್ಕೆ ಒಳಗಾಗಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಇರುವ ಶಿವಕುಮಾರ್ ಅವರ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಅ. 1 ರಂದು ಮಂಗಳವಾರ ಪೂರ್ಣಗೊಳ್ಳಲಿದೆ. ಇ.ಡಿ. ವಿಶೇಷ ನ್ಯಾಯಾಲಯವು ಸೆ. 25ರಂದು ಅವರ ಜಾಮೀನು ಅರ್ಜಿ ಯನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>