<p><strong>ಬೆಂಗಳೂರು:</strong> ‘ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಹಿಂಬಾಗಿಲಿನ ಮೂಲಕ ಮಾಡುತ್ತಿದೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಬಜೆಟ್ನಲ್ಲಿ ಗುಜರಾತ್, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ’ ಎಂದೂ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರದ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಗಳು ಆಗಿವೆ’ ಎಂದರು.</p>.<p>‘ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ದಕ್ಷಿಣ ಭಾರತವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಹಿಂಬಾಗಿಲಿನ ಮೂಲಕ ಮಾಡುತ್ತಿದೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.</p>.<p>ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಬಜೆಟ್ನಲ್ಲಿ ಗುಜರಾತ್, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ’ ಎಂದು ದೂರಿದರು.</p>.<p>‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ’ ಎಂದೂ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರದ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಗಳು ಆಗಿವೆ’ ಎಂದರು.</p>.<p>‘ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ದಕ್ಷಿಣ ಭಾರತವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ’ ಎಂದೂ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>