<p>ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐ.ಟಿ) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿ, ವಿಚಾರಣೆ ಎದುರಿಸಿದರು.</p>.<p>ಡಿಕೆಶಿ ಹಾಗೂ ಅವರ ಆಪ್ತರ ವಿರುದ್ಧ ಐ.ಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದ 4ನೇ ಪ್ರಾಸಿಕ್ಯೂಷನ್ ವರದಿ ಸಂಬಂಧ ಡಿಕೆಶಿ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಕೆಲ ಹೊತ್ತಿನ ಬಳಿಕ ಇದೇ 20ಕ್ಕೆ ವಿಚಾರಣೆ ಮುಂದೂಡಿದರು.</p>.<p>ಪ್ರಕರಣದಿಂದ ಕೈ ಬಿಡುವಂತೆ ಡಿಕೆಶಿ ಹಾಗೂ ಅವರ ಆಪ್ತರು ಈ ಮೊದಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಇತರ ಆರೋಪಿಗಳುಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ವಿಚಾರವನ್ನು ವಕೀಲರು ನ್ಯಾಯಾದೀಶರ ಗಮನಕ್ಕೆ ತಂದರು.</p>.<p class="Subhead">ಮನವಿ ತಿರಸ್ಕೃತ: ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ತಿಂಗಳ ವಿನಾಯಿತಿ ಕೊಡಬೇಕು ಎಂದು ನ್ಯಾಯಾಧೀಶರ ಮುಂದೆ ವಕೀಲರು ಮನವಿ ಮಾಡಿದರು.</p>.<p>ಇದರಿಂದ ಗರಂ ಆದ ನ್ಯಾಯಾಧೀಶರು, ‘ತಿಂಗಳ ಕಾಲಾವಕಾಶ ಏಕೆ ಬೇಕು ಎಂದು ಕೇಳಿದರು. ಸುಪ್ರೀಂಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸುವುದರಿಂದ ಡಿ.20ಕ್ಕೆ ನಾವು ಸಾಕ್ಷಿಗಳನ್ನು ವಿಚಾರಣೆ ನಡೆಸಲು ಅಡ್ಡಿಯಿಲ್ಲ. ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ’ ಎಂದರು.</p>.<p>ಶಿವಕುಮಾರ್ 2016– 17ನೇ ಸಾಲಿನಲ್ಲಿ ತಮ್ಮ ಆಸ್ತಿಗೆ ಸರಿಯಾದ ತೆರಿಗೆ ಪಾವತಿಸದ ಆರೋಪಕ್ಕೆ ಒಳಗಾಗಿದ್ದಾರೆ. ಐ.ಟಿ ಈ ಕಾರಣಕ್ಕೆ 2017ರ ಆಗಸ್ಟ್ 2ರಂದು ಶಿವಕುಮಾರ್ ಅವರ ಸದಾಶಿವನಗರದ ಮನೆ, ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿರುವ ಫ್ಲ್ಯಾಟ್ ಮತ್ತು ಇದೇ ಎನ್ಕ್ಲೇವ್ನಲ್ಲಿರುವ ಅವರ ಆಪ್ತರ ಮನೆಗಳಲ್ಲದೆ, ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿತ್ತು.</p>.<p>ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ಸಮಯದಲ್ಲಿ ‘ಕುದುರೆ ವ್ಯಾಪಾರ’ ತಪ್ಪಿಸಲು ಅಲ್ಲಿನ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ಗೆ ಕರೆತಂದು ಇಟ್ಟಿದ್ದ ವೇಳೆಯಲ್ಲೇ ಈ ದಾಳಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆದಾಯ ತೆರಿಗೆ ಇಲಾಖೆ (ಐ.ಟಿ) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಿ, ವಿಚಾರಣೆ ಎದುರಿಸಿದರು.</p>.<p>ಡಿಕೆಶಿ ಹಾಗೂ ಅವರ ಆಪ್ತರ ವಿರುದ್ಧ ಐ.ಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದ 4ನೇ ಪ್ರಾಸಿಕ್ಯೂಷನ್ ವರದಿ ಸಂಬಂಧ ಡಿಕೆಶಿ ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಕೆಲ ಹೊತ್ತಿನ ಬಳಿಕ ಇದೇ 20ಕ್ಕೆ ವಿಚಾರಣೆ ಮುಂದೂಡಿದರು.</p>.<p>ಪ್ರಕರಣದಿಂದ ಕೈ ಬಿಡುವಂತೆ ಡಿಕೆಶಿ ಹಾಗೂ ಅವರ ಆಪ್ತರು ಈ ಮೊದಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಇತರ ಆರೋಪಿಗಳುಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ವಿಚಾರವನ್ನು ವಕೀಲರು ನ್ಯಾಯಾದೀಶರ ಗಮನಕ್ಕೆ ತಂದರು.</p>.<p class="Subhead">ಮನವಿ ತಿರಸ್ಕೃತ: ಸುಪ್ರೀಂಕೋರ್ಟ್ನಲ್ಲಿ ಪ್ರಕರಣ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ತಿಂಗಳ ವಿನಾಯಿತಿ ಕೊಡಬೇಕು ಎಂದು ನ್ಯಾಯಾಧೀಶರ ಮುಂದೆ ವಕೀಲರು ಮನವಿ ಮಾಡಿದರು.</p>.<p>ಇದರಿಂದ ಗರಂ ಆದ ನ್ಯಾಯಾಧೀಶರು, ‘ತಿಂಗಳ ಕಾಲಾವಕಾಶ ಏಕೆ ಬೇಕು ಎಂದು ಕೇಳಿದರು. ಸುಪ್ರೀಂಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸುವುದರಿಂದ ಡಿ.20ಕ್ಕೆ ನಾವು ಸಾಕ್ಷಿಗಳನ್ನು ವಿಚಾರಣೆ ನಡೆಸಲು ಅಡ್ಡಿಯಿಲ್ಲ. ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ’ ಎಂದರು.</p>.<p>ಶಿವಕುಮಾರ್ 2016– 17ನೇ ಸಾಲಿನಲ್ಲಿ ತಮ್ಮ ಆಸ್ತಿಗೆ ಸರಿಯಾದ ತೆರಿಗೆ ಪಾವತಿಸದ ಆರೋಪಕ್ಕೆ ಒಳಗಾಗಿದ್ದಾರೆ. ಐ.ಟಿ ಈ ಕಾರಣಕ್ಕೆ 2017ರ ಆಗಸ್ಟ್ 2ರಂದು ಶಿವಕುಮಾರ್ ಅವರ ಸದಾಶಿವನಗರದ ಮನೆ, ದೆಹಲಿಯ ಸಫ್ದರ್ಜಂಗ್ ಎನ್ಕ್ಲೇವ್ನಲ್ಲಿರುವ ಫ್ಲ್ಯಾಟ್ ಮತ್ತು ಇದೇ ಎನ್ಕ್ಲೇವ್ನಲ್ಲಿರುವ ಅವರ ಆಪ್ತರ ಮನೆಗಳಲ್ಲದೆ, ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿತ್ತು.</p>.<p>ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ಸಮಯದಲ್ಲಿ ‘ಕುದುರೆ ವ್ಯಾಪಾರ’ ತಪ್ಪಿಸಲು ಅಲ್ಲಿನ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ಗೆ ಕರೆತಂದು ಇಟ್ಟಿದ್ದ ವೇಳೆಯಲ್ಲೇ ಈ ದಾಳಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>