ಸದನದಲ್ಲಿದ್ದ ಶಿವಕುಮಾರ್ ಅವರನ್ನು ಸಚಿವರು, ಶಾಸಕರು ಸುತ್ತುವರಿದು ಮಾತುಕತೆಯಲ್ಲಿ ತೊಡಗಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಆರ್.ವಿ. ದೇಶಪಾಂಡೆ, ಲಕ್ಷ್ಮಣ ಸವದಿ, ಯು.ಬಿ. ಬಣಕಾರ, ವಿನಯ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ, ಮಹಾಂತೇಶ ಕೌಜಲಗಿ ಸೇರಿದಂತೆ ಬೆಳಗಾವಿ ಮತ್ತು ಉತ್ತರ ಕರ್ನಾಟಕ ಭಾಗದ ಶಾಸಕರು ಇದ್ದರು. ಶಿವಕುಮಾರ್ ಜತೆ ನಿಕಟವಾಗಿ ಗುರುತಿಸಿಕೊಂಡಿರುವ ದಕ್ಷಿಣ ಕರ್ನಾಟಕದ ಯಾವುದೇ ಶಾಸಕರೂ ಈ ವೇಳೆ ಇರಲಿಲ್ಲ.